<p><strong>ಗುಬ್ಬಿ:</strong> ಪಟ್ಟಣದಲ್ಲಿನ 13ನೇ ವಾರ್ಡ್ ಮಹಾಲಲಕ್ಷ್ಮಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯಲು ಯೋಗ್ಯವಲ್ಲದ ನೀರು ಪೂರೈಕೆ ಆಗುತ್ತಿದೆ.</p>.<p>ಈ ಹಿಂದೆ ಹೇರೂರು ಕೆರೆಯಿಂದ ಶುದ್ಧೀಕರಿಸದೆ ನೀರನ್ನೇ ನೇರವಾಗಿ ಪಟ್ಟಣದ ಮನೆಗಳಿಗೆ ಪೂರೈಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ನೀರು ಶುದ್ಧೀಕರಣ ಘಟಕ ಕೆಟ್ಟು ನಿಂತು ತಿಂಗಳುಗಳೇ ಕಳೆದಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಅನೇಕ ಬಾರಿ ಭೇಟಿ ನೀಡಿ ದುರಸ್ತಿಗೆ ಸೂಚಿಸಿದರೂ ದುರಸ್ತಿಯಾಗಿರಲಿಲ್ಲ.</p>.<p>ಈ ಸಂಬಂಧ ‘ಪ್ರಜಾವಾಣಿ’ಯು ಕಲುಷಿತ ನೀರನ್ನು ಪೂರೈಕೆ ಮಾಡುತ್ತಿರುವ ಬಗ್ಗೆ ‘ಗುಬ್ಬಿವಾಸಿಗಳಿಗಿಲ್ಲ ಶುದ್ಧ ಕುಡಿಯುವ ನೀರು’ ಎಂಬ ಶೀರ್ಷಿಕೆಯಡಿ ಇತ್ತೀಚೆಗೆ ವರದಿ ಪ್ರಕಟಿಸಿತ್ತು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಕುಡಿಯುವ ನೀರಿನಫಿಲ್ಟರ್ ಬದಲಾವಣೆಗೆ<br />ಮುಂದಾದರು.</p>.<p>ಅಲ್ಲದೆ, ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿನ ಫಿಲ್ಟರ್ ಬದಲಾವಣೆಗೆ 14ನೇ ಹಣಕಾಸು ಯೋಜನೆಯಡಿ ಉಳಿಕೆಯಾದ ₹7.19 ಲಕ್ಷ ಬಳಸಿಕೊಳ್ಳಲು ಅನುಮೋದನೆ ದೊರೆತು, ಘಟಕವನ್ನು ದುರಸ್ತಿ ಮಾಡಲಾಯಿತು.</p>.<p>ಆದರೂ ಭಾನುವಾರ ಹಳದಿ ಮಿಶ್ರಿತ ಕಲುಷಿತ ನೀರು ಮಹಾಲಕ್ಷ್ಮಿನಗರದಲ್ಲಿ ಸರಬರಾಜು ಆಗಿದೆ. ಇದರಿಂದ ಬೇಸರಗೊಂಡ ನಾಗರಿಕರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಪಟ್ಟಣದಲ್ಲಿನ 13ನೇ ವಾರ್ಡ್ ಮಹಾಲಲಕ್ಷ್ಮಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯಲು ಯೋಗ್ಯವಲ್ಲದ ನೀರು ಪೂರೈಕೆ ಆಗುತ್ತಿದೆ.</p>.<p>ಈ ಹಿಂದೆ ಹೇರೂರು ಕೆರೆಯಿಂದ ಶುದ್ಧೀಕರಿಸದೆ ನೀರನ್ನೇ ನೇರವಾಗಿ ಪಟ್ಟಣದ ಮನೆಗಳಿಗೆ ಪೂರೈಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ನೀರು ಶುದ್ಧೀಕರಣ ಘಟಕ ಕೆಟ್ಟು ನಿಂತು ತಿಂಗಳುಗಳೇ ಕಳೆದಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಅನೇಕ ಬಾರಿ ಭೇಟಿ ನೀಡಿ ದುರಸ್ತಿಗೆ ಸೂಚಿಸಿದರೂ ದುರಸ್ತಿಯಾಗಿರಲಿಲ್ಲ.</p>.<p>ಈ ಸಂಬಂಧ ‘ಪ್ರಜಾವಾಣಿ’ಯು ಕಲುಷಿತ ನೀರನ್ನು ಪೂರೈಕೆ ಮಾಡುತ್ತಿರುವ ಬಗ್ಗೆ ‘ಗುಬ್ಬಿವಾಸಿಗಳಿಗಿಲ್ಲ ಶುದ್ಧ ಕುಡಿಯುವ ನೀರು’ ಎಂಬ ಶೀರ್ಷಿಕೆಯಡಿ ಇತ್ತೀಚೆಗೆ ವರದಿ ಪ್ರಕಟಿಸಿತ್ತು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಕುಡಿಯುವ ನೀರಿನಫಿಲ್ಟರ್ ಬದಲಾವಣೆಗೆ<br />ಮುಂದಾದರು.</p>.<p>ಅಲ್ಲದೆ, ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿನ ಫಿಲ್ಟರ್ ಬದಲಾವಣೆಗೆ 14ನೇ ಹಣಕಾಸು ಯೋಜನೆಯಡಿ ಉಳಿಕೆಯಾದ ₹7.19 ಲಕ್ಷ ಬಳಸಿಕೊಳ್ಳಲು ಅನುಮೋದನೆ ದೊರೆತು, ಘಟಕವನ್ನು ದುರಸ್ತಿ ಮಾಡಲಾಯಿತು.</p>.<p>ಆದರೂ ಭಾನುವಾರ ಹಳದಿ ಮಿಶ್ರಿತ ಕಲುಷಿತ ನೀರು ಮಹಾಲಕ್ಷ್ಮಿನಗರದಲ್ಲಿ ಸರಬರಾಜು ಆಗಿದೆ. ಇದರಿಂದ ಬೇಸರಗೊಂಡ ನಾಗರಿಕರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>