<p><strong>ತುಮಕೂರು: </strong>ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ವೇತನ ಪಾವತಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ.ಜಿ.ಸಿ.ನವ್ಯಬಾಬು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು ಹಾಗೂ ನರ್ಸ್ಗಳನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>ಸರ್ಕಾರಿ ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮವಹಿಸಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ಹೈದಾರಾಬಾದ್-ಕರ್ನಾಟಕ ಭಾಗದಲ್ಲಿ ಇರುವಂತೆ ಶಿಬಿರಗಳನ್ನು ಜಿಲ್ಲೆಯಲ್ಲಿಯೂ ನಡೆಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಸರ್ಕಾರಿ/ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ವಿತರಿಸುವ ಹಾಲು ಮತ್ತು ಆಹಾರದಲ್ಲಿ ವ್ಯತ್ಯಾಸ ಆಗದಂತೆ ಎಚ್ಚರವಹಿಸಬೇಕು ಎಂದರು.</p>.<p>ಸಮಿತಿ ಸದಸ್ಯರಾದ ಕೆಂಪ ಚೌಡಪ್ಪ, ಸಿದ್ದರಾಮಯ್ಯ, ಚನ್ನಮಲ್ಲಪ್ಪ, ಗಾಯತ್ರಿದೇವಿ, ಯಶೋದಮ್ಮ, ಸ್ಥಾಯಿ ಸಮಿತಿ ಸದಸ್ಯ ಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇಲಾಖಾವಾರು ಅನುಷ್ಠಾನ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ವೇತನ ಪಾವತಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ.ಜಿ.ಸಿ.ನವ್ಯಬಾಬು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು ಹಾಗೂ ನರ್ಸ್ಗಳನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>ಸರ್ಕಾರಿ ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮವಹಿಸಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ಹೈದಾರಾಬಾದ್-ಕರ್ನಾಟಕ ಭಾಗದಲ್ಲಿ ಇರುವಂತೆ ಶಿಬಿರಗಳನ್ನು ಜಿಲ್ಲೆಯಲ್ಲಿಯೂ ನಡೆಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಸರ್ಕಾರಿ/ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ವಿತರಿಸುವ ಹಾಲು ಮತ್ತು ಆಹಾರದಲ್ಲಿ ವ್ಯತ್ಯಾಸ ಆಗದಂತೆ ಎಚ್ಚರವಹಿಸಬೇಕು ಎಂದರು.</p>.<p>ಸಮಿತಿ ಸದಸ್ಯರಾದ ಕೆಂಪ ಚೌಡಪ್ಪ, ಸಿದ್ದರಾಮಯ್ಯ, ಚನ್ನಮಲ್ಲಪ್ಪ, ಗಾಯತ್ರಿದೇವಿ, ಯಶೋದಮ್ಮ, ಸ್ಥಾಯಿ ಸಮಿತಿ ಸದಸ್ಯ ಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇಲಾಖಾವಾರು ಅನುಷ್ಠಾನ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>