‘ಕೆಆರ್ಐಡಿಎಲ್ ಅಡಿ ವಿವಿಧ ಕಾಮಗಾರಿಗಳಿಗಾಗಿ ₹25 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ, ಇದರಲ್ಲಿ ಶೇ 25 ರಷ್ಟೂ ಕೆಲಸವಾಗಿಲ್ಲ. ಗುಣಮಟ್ಟ ಪರೀಕ್ಷೆ ಮಾಡುವವರೇ ಇಲ್ಲ. ಸುಳ್ಳು ದಾಖಲೆ ಪಡೆದು ಟೆಂಡರ್ ನೀಡುವ ಕೆಲಸ ಮಾಡುತ್ತಿದ್ದಾರೆ. ನಿರ್ಮಿತಿ ಕೇಂದ್ರದವರಿಗೆ ಯಾಕೆ ಕೆಲಸ ಕೊಡ್ತಾರೆ? ಅಧಿಕಾರಿಗಳೊಂದಿಗೆ ಕೈಜೋಡಿಸಿ ನಕಲಿ ದಾಖಲೆ ನೀಡಿ ಕೆಲಸ ಮಾಡುತ್ತಿದ್ದಾರೆ. ಆದರೆ, ಅಧಿಕಾರಿಗಳು ನಮ್ಮ ಸ್ಥಳೀಯ ಗುತ್ತಿಗೆದಾರರ ಪ್ರತಿಯೊಂದು ಕೆಲಸವನ್ನು ಪರಿಶೀಲಿಸುತ್ತಾರೆ. ಅರ್ಧಂಬರ್ಧ ಕೆಲಸ ಮಾಡಿ ಓಡಿ ಹೋಗಿರುವವರ ವಿರುದ್ಧ ಸರ್ಕಾರ ಏನು ಕ್ರಮ ಕೈಗೊಂಡಿದೆ’ ಎಂದು ಪ್ರಶ್ನಿಸಿದರು.