<p><strong>ತುಮಕೂರು</strong>: ಮಧುಮೇಹ ಪ್ರಪಂಚದಾದ್ಯಂತ ಹರಡಿರುವ ಕಾಯಿಲೆ. ಎಲ್ಲರ ಮನೆಯಲ್ಲಿಯೂ ಸಕ್ಕರೆ ಕಾಯಿಲೆಯುಳ್ಳವರು ಇದ್ದೇ ಇರುತ್ತಾರೆ ಎನ್ನುವ ಸ್ಥಿತಿ ಇದೆ ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಉಪನ್ಯಾಸಕ ಡಾ.ಸುರೇಶ್ ಬಾಬು ತಿಳಿಸಿದರು.</p>.<p>ನಗರದ ಕನ್ನಡ ಭವನದಲ್ಲಿ ಶನಿವಾರ ಭಾರತೀಯ ವೈದ್ಯಕೀಯ ಸಂಘ ಮಧುಮೇಹ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದರು.</p>.<p>ಇಂದು ಮಧುಮೇಹ ರೋಗಿಗಳು ದಕ್ಷಿಣ ಭಾರತದಲ್ಲಿ ಹೆಚ್ಚುತ್ತಿದ್ದಾರೆ. ಕರ್ನಾಟಕದಲ್ಲಿಯೂ ರೋಗವು ಹೆಚ್ಚಾಗುತ್ತಿದೆ. ದೈಹಿಕ ಚಟುವಟಿಕೆ ಇಲ್ಲದೇ ಇರುವುದೇ ಇದಕ್ಕೆ ಕಾರಣ. ದೈಹಿಕ ಚಟುವಟಿಕೆಗಳನ್ನು ನಿಯಮಿತವಾಗಿ ಮಾಡುವುದರಿಂದ ಮಧುಮೇಹ ತಡೆ ಸಾಧ್ಯ. ವಂಶವಾಹಿಗಳ ಮೂಲಕವೂ ಬರುವ ಮಧುಮೇಹ ಮಾರಕ ಕಾಯಿಲೆ ಎಂದು ಹೇಳಿದರು.</p>.<p>ದಿನಕ್ಕೆ 30ನಿಮಿಷ, ವಾರಕ್ಕೆ ಐದು ವ್ಯಾಯಾಮ ಮಾಡುವುದರಿಂದ ಮಧುಮೇಹ ನಿಯಂತ್ರಿಸಬಹುದು. ವ್ಯಾಯಾಮ ಮಾಡದೆ ಔಷಧೋಪಚಾರಗಳಿಂದ ಮಧುಮೇಹ ನಿಯಂತ್ರಿಸಲು ಜನರು ಮುಂದಾಗುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು.</p>.<p>ಮಧುಮೇಹಕ್ಕೂ ಹೃದಯಕ್ಕೂ ಹತ್ತಿರವಾದ ಸಂಬಂಧ ಇದೆ. ಮಧುಮೇಹ ನಿಯಂತ್ರಿಸದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಲಿವೆ.ಮಧುಮೇಹಿಗಳು ಸ್ವಲ್ಪ ಸುಸ್ತಾದರೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಮಹೇಶ್, ಮಧುಮೇಹ ಮಾಸಾಚರಣೆ ಅಂಗವಾಗಿ ಮಧುಮೇಹ ಸಂಬಂಧಿತ ಕಾಯಿಲೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಧುಮೇಹಿಗಳಿಗೆ ಬರಬಹುದಾದ ರೋಗಲಕ್ಷಣಗಳ ಬಗ್ಗೆ ಜನರು ಅರಿವು ಹೊಂದುವುದು ಅವಶ್ಯ ಎಂದು ಹೇಳಿದರು.</p>.<p>ಡಾ.ದುರ್ಗಾದಾಸ್ ಅವರು ‘ಸ್ತ್ರೀಯರು ಹಾಗೂ ಗರ್ಭಿಣಿಯರಲ್ಲಿ ಮಧುಮೇಹ’ದ ಕುರಿತು ಉಪನ್ಯಾಸ ನೀಡಿದರು.</p>.<p>ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಶ್ರೀನಾಥ್, ಡಾ.ಪುಟ್ಟರಾಜು, ಡಯಾಬಿಟಿಕ್ ಕ್ಲಬ್ ಅಧ್ಯಕ್ಷ ಡಾ.ರಾಜಶೇಖರ್, ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಡಾ.ದುರ್ಗಾದಾಸ್, ಡಾ.ಸುಧೀರ್, ಡಾ.ಯಶವಂತ್, ಡಾ.ಲೋಕೇಶ್, ಆಹಾರ ತಜ್ಞರಾದ ಸಿದ್ದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಮಧುಮೇಹ ಪ್ರಪಂಚದಾದ್ಯಂತ ಹರಡಿರುವ ಕಾಯಿಲೆ. ಎಲ್ಲರ ಮನೆಯಲ್ಲಿಯೂ ಸಕ್ಕರೆ ಕಾಯಿಲೆಯುಳ್ಳವರು ಇದ್ದೇ ಇರುತ್ತಾರೆ ಎನ್ನುವ ಸ್ಥಿತಿ ಇದೆ ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಉಪನ್ಯಾಸಕ ಡಾ.ಸುರೇಶ್ ಬಾಬು ತಿಳಿಸಿದರು.</p>.<p>ನಗರದ ಕನ್ನಡ ಭವನದಲ್ಲಿ ಶನಿವಾರ ಭಾರತೀಯ ವೈದ್ಯಕೀಯ ಸಂಘ ಮಧುಮೇಹ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದರು.</p>.<p>ಇಂದು ಮಧುಮೇಹ ರೋಗಿಗಳು ದಕ್ಷಿಣ ಭಾರತದಲ್ಲಿ ಹೆಚ್ಚುತ್ತಿದ್ದಾರೆ. ಕರ್ನಾಟಕದಲ್ಲಿಯೂ ರೋಗವು ಹೆಚ್ಚಾಗುತ್ತಿದೆ. ದೈಹಿಕ ಚಟುವಟಿಕೆ ಇಲ್ಲದೇ ಇರುವುದೇ ಇದಕ್ಕೆ ಕಾರಣ. ದೈಹಿಕ ಚಟುವಟಿಕೆಗಳನ್ನು ನಿಯಮಿತವಾಗಿ ಮಾಡುವುದರಿಂದ ಮಧುಮೇಹ ತಡೆ ಸಾಧ್ಯ. ವಂಶವಾಹಿಗಳ ಮೂಲಕವೂ ಬರುವ ಮಧುಮೇಹ ಮಾರಕ ಕಾಯಿಲೆ ಎಂದು ಹೇಳಿದರು.</p>.<p>ದಿನಕ್ಕೆ 30ನಿಮಿಷ, ವಾರಕ್ಕೆ ಐದು ವ್ಯಾಯಾಮ ಮಾಡುವುದರಿಂದ ಮಧುಮೇಹ ನಿಯಂತ್ರಿಸಬಹುದು. ವ್ಯಾಯಾಮ ಮಾಡದೆ ಔಷಧೋಪಚಾರಗಳಿಂದ ಮಧುಮೇಹ ನಿಯಂತ್ರಿಸಲು ಜನರು ಮುಂದಾಗುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು.</p>.<p>ಮಧುಮೇಹಕ್ಕೂ ಹೃದಯಕ್ಕೂ ಹತ್ತಿರವಾದ ಸಂಬಂಧ ಇದೆ. ಮಧುಮೇಹ ನಿಯಂತ್ರಿಸದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಲಿವೆ.ಮಧುಮೇಹಿಗಳು ಸ್ವಲ್ಪ ಸುಸ್ತಾದರೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಮಹೇಶ್, ಮಧುಮೇಹ ಮಾಸಾಚರಣೆ ಅಂಗವಾಗಿ ಮಧುಮೇಹ ಸಂಬಂಧಿತ ಕಾಯಿಲೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಧುಮೇಹಿಗಳಿಗೆ ಬರಬಹುದಾದ ರೋಗಲಕ್ಷಣಗಳ ಬಗ್ಗೆ ಜನರು ಅರಿವು ಹೊಂದುವುದು ಅವಶ್ಯ ಎಂದು ಹೇಳಿದರು.</p>.<p>ಡಾ.ದುರ್ಗಾದಾಸ್ ಅವರು ‘ಸ್ತ್ರೀಯರು ಹಾಗೂ ಗರ್ಭಿಣಿಯರಲ್ಲಿ ಮಧುಮೇಹ’ದ ಕುರಿತು ಉಪನ್ಯಾಸ ನೀಡಿದರು.</p>.<p>ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಶ್ರೀನಾಥ್, ಡಾ.ಪುಟ್ಟರಾಜು, ಡಯಾಬಿಟಿಕ್ ಕ್ಲಬ್ ಅಧ್ಯಕ್ಷ ಡಾ.ರಾಜಶೇಖರ್, ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಡಾ.ದುರ್ಗಾದಾಸ್, ಡಾ.ಸುಧೀರ್, ಡಾ.ಯಶವಂತ್, ಡಾ.ಲೋಕೇಶ್, ಆಹಾರ ತಜ್ಞರಾದ ಸಿದ್ದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>