<p><strong>ಕುಣಿಗಲ್:</strong> ತಾಲ್ಲೂಕು ಒಕ್ಕಲಿಗ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಜ್ಞಾನಭಾರತಿ ವಿದ್ಯಾಸಂಸ್ಥೆ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡುವೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ಪಟ್ಟಣದ ಒಕ್ಕಲಿಗ ಸಂಘದ ಕಚೇರಿಗೆ ಭೇಟಿ ನೀಡಿ ಸಂಘದ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದರು.</p>.<p>ಕಟ್ಟಡ ನಿರ್ಮಾಣಕ್ಕೆ ಅನುದಾನ, ಕೌಶಲ ತರಬೇತಿ ಕೇಂದ್ರ, ಪದವಿ ಕಾಲೇಜು ಮತ್ತು ಡಿಪ್ಲೊಮ ಕೋರ್ಸ್, ಅರೆ ವೈದ್ಯಕೀಯ ಶಿಕ್ಷಣ ಕಾಲೇಜು ಆರಂಭ ಹೀಗೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಂಘದ ಕಾರ್ಯದರ್ಶಿ ಅನಂತಯ್ಯ ಹಾಗೂ ಬಿ.ಎಂ.ಹುಚ್ಚೇಗೌಡ ಸಲ್ಲಿಸಿದರು.</p>.<p>ಜ್ಞಾನಭಾರತಿ ವಿದ್ಯಾ ಸಂಸ್ಥೆ ಪ್ರತಿ ವರ್ಷ ಉತ್ತಮ ಪಲಿತಾಂಶ ಪಡೆಯುತ್ತಿದೆ. ಸಂಘದ ಪದಾಧಿಕಾರಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವೆ ಎಂದು ಭರವಸೆ ನೀಡಿದರು.</p>.<p>ಶಾಸಕ ಮಂಜುನಾಥ್, ಆ.ದೇವೇಗೌಡ, ತಾಲ್ಲೂಕು ಒಕ್ಕಲಿಗ ಸಂಘದ ಉಪಾಧ್ಯಕ್ಷ ರಾಜಣ್ಣ, ಖಜಾಂಚಿ ಗಂಗಶಾನಯ್ಯ, ನಿರ್ದೇಶಕರಾದ ನರಸಿಂಹಯ್ಯ, ಸೋಮಶೇಖರ್, ಚನ್ನಪ್ಪ, ಬಲರಾಮರಾಜು, ಪ್ರಾಂಶುಪಾಲ ಡಾ.ಕಪನಿಪಾಳ್ಯ ರಮೇಶ್, ಮುಖ್ಯಶಿಕ್ಷಕ ಗೋವಿಂದೇಗೌಡ ಹಾಗೂ ಪ್ರಕಾಶಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕು ಒಕ್ಕಲಿಗ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಜ್ಞಾನಭಾರತಿ ವಿದ್ಯಾಸಂಸ್ಥೆ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡುವೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ಪಟ್ಟಣದ ಒಕ್ಕಲಿಗ ಸಂಘದ ಕಚೇರಿಗೆ ಭೇಟಿ ನೀಡಿ ಸಂಘದ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದರು.</p>.<p>ಕಟ್ಟಡ ನಿರ್ಮಾಣಕ್ಕೆ ಅನುದಾನ, ಕೌಶಲ ತರಬೇತಿ ಕೇಂದ್ರ, ಪದವಿ ಕಾಲೇಜು ಮತ್ತು ಡಿಪ್ಲೊಮ ಕೋರ್ಸ್, ಅರೆ ವೈದ್ಯಕೀಯ ಶಿಕ್ಷಣ ಕಾಲೇಜು ಆರಂಭ ಹೀಗೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಂಘದ ಕಾರ್ಯದರ್ಶಿ ಅನಂತಯ್ಯ ಹಾಗೂ ಬಿ.ಎಂ.ಹುಚ್ಚೇಗೌಡ ಸಲ್ಲಿಸಿದರು.</p>.<p>ಜ್ಞಾನಭಾರತಿ ವಿದ್ಯಾ ಸಂಸ್ಥೆ ಪ್ರತಿ ವರ್ಷ ಉತ್ತಮ ಪಲಿತಾಂಶ ಪಡೆಯುತ್ತಿದೆ. ಸಂಘದ ಪದಾಧಿಕಾರಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವೆ ಎಂದು ಭರವಸೆ ನೀಡಿದರು.</p>.<p>ಶಾಸಕ ಮಂಜುನಾಥ್, ಆ.ದೇವೇಗೌಡ, ತಾಲ್ಲೂಕು ಒಕ್ಕಲಿಗ ಸಂಘದ ಉಪಾಧ್ಯಕ್ಷ ರಾಜಣ್ಣ, ಖಜಾಂಚಿ ಗಂಗಶಾನಯ್ಯ, ನಿರ್ದೇಶಕರಾದ ನರಸಿಂಹಯ್ಯ, ಸೋಮಶೇಖರ್, ಚನ್ನಪ್ಪ, ಬಲರಾಮರಾಜು, ಪ್ರಾಂಶುಪಾಲ ಡಾ.ಕಪನಿಪಾಳ್ಯ ರಮೇಶ್, ಮುಖ್ಯಶಿಕ್ಷಕ ಗೋವಿಂದೇಗೌಡ ಹಾಗೂ ಪ್ರಕಾಶಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>