<p><strong>ಗುಬ್ಬಿ</strong>: ಸೋಮವಾರದಿಂದ ಪಟ್ಟಣದ ಎಪಿಎಂಸಿ ಹಾಗೂ ಚೇಳೂರು ಎಪಿಎಂಸಿಯಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಕಾರ್ಯ ಪ್ರಾರಂಭವಾಯಿತು. ಕಳೆದ ಬಾರಿ ಕೇವಲ 3 ದಿನಕ್ಕೆ ನೋಂದಣಿ ನಿಲ್ಲಿಸಿದ್ದರಿಂದ, ಈ ಬಾರಿ ರೈತರು ಮಧ್ಯರಾತ್ರಿಯೇ ಖರೀದಿ ಕೇಂದ್ರದ ಬಳಿ ಜಮಾಯಿಸಿದ್ದರು.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದ್ದರೂ ಅಗತ್ಯ ಕ್ರಮವಹಿಸದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಾರಂಭದಲ್ಲಿ ಸರ್ವರ್ ಸಮಸ್ಯೆ ಹಾಗೂ ವಿದ್ಯುತ್ ಸಮಸ್ಯೆಯಿಂದ ರೈತರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿತ್ತು. ನೋಂದಣಿ ಸ್ಥಳದಲ್ಲಿ ಕನಿಷ್ಠ ಕುಡಿಯುವ ನೀರಿನ ಸೌಕರ್ಯವನ್ನು ಒದಗಿಸದ ಅಧಿಕಾರಿಗಳ ವಿರುದ್ಧ ರೈತರು ಬೇಸರ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು.</p>.<p>ಸಾವಿರಾರು ರೈತರು, ಮಹಿಳೆಯರು, ಹಿರಿಯ ನಾಗರಿಕರು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರೂ ಅಧಿಕಾರಿಗಳು ಕನಿಷ್ಠ ಸೌಜನ್ಯವನ್ನು ತೋರುತ್ತಿಲ್ಲ. ಅಗತ್ಯವಿರುವ ತಯಾರಿಯನ್ನೂ ಮಾಡಿಕೊಂಡಿಲ್ಲ. ರೈತರ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ರೈತ ಕೆಂಪಣ್ಣ ಬೇಸರ ವ್ಯಕ್ತಪಡಿಸಿದರು.</p>.<p>ಸುಮಾರು 20 ಕಿ.ಮೀ ದೂರದಿಂದ ಬೆಳಿಗ್ಗೆ ಬಂದು ಕಾಯುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ನೊಂದಣಿ ಕಾರ್ಯ ಆಸ್ತವ್ಯಸ್ತವಾಗುತ್ತಿದೆ ರೈತ ಮಹಿಳೆ ಜಯಮ್ಮ ಬೇಸರ ವ್ಯಕ್ತಪಡಿಸಿದರು.</p>.<p>ಮಧ್ಯಾಹ್ನದ ವೇಳೆ ಸಮಸ್ಯೆಯನ್ನು ಅರಿತ ಅಧಿಕಾರಿಗಳು ಆಧಾರ್ ಕಾರ್ಡ್ ಹೊಂದಿದ್ದ ಸುಮಾರು 1,200 ರೈತರಿಗೆ ನೋಂದಣಿ ಕೂಪನ್ ನೀಡಿ ನಂತರ ಬಯೋಮೆಟ್ರಿಕ್ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದರಿಂದ ಪರಿಸ್ಥಿತಿ ತಿಳಿಯಾಯಿತು.</p>.<p>ಮೊದಲ ದಿನವಾಗಿದ್ದರಿಂದ ನೋಂದಣಿಗೆ ಪ್ರಾರಂಭದಲ್ಲಿ ಸ್ವಲ್ಪ ಅಡೆತಡೆ ಉಂಟಾಗಿತ್ತು. ನಾಳೆಯಿಂದ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ ಎಂದು ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಸೋಮವಾರದಿಂದ ಪಟ್ಟಣದ ಎಪಿಎಂಸಿ ಹಾಗೂ ಚೇಳೂರು ಎಪಿಎಂಸಿಯಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಕಾರ್ಯ ಪ್ರಾರಂಭವಾಯಿತು. ಕಳೆದ ಬಾರಿ ಕೇವಲ 3 ದಿನಕ್ಕೆ ನೋಂದಣಿ ನಿಲ್ಲಿಸಿದ್ದರಿಂದ, ಈ ಬಾರಿ ರೈತರು ಮಧ್ಯರಾತ್ರಿಯೇ ಖರೀದಿ ಕೇಂದ್ರದ ಬಳಿ ಜಮಾಯಿಸಿದ್ದರು.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದ್ದರೂ ಅಗತ್ಯ ಕ್ರಮವಹಿಸದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಾರಂಭದಲ್ಲಿ ಸರ್ವರ್ ಸಮಸ್ಯೆ ಹಾಗೂ ವಿದ್ಯುತ್ ಸಮಸ್ಯೆಯಿಂದ ರೈತರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿತ್ತು. ನೋಂದಣಿ ಸ್ಥಳದಲ್ಲಿ ಕನಿಷ್ಠ ಕುಡಿಯುವ ನೀರಿನ ಸೌಕರ್ಯವನ್ನು ಒದಗಿಸದ ಅಧಿಕಾರಿಗಳ ವಿರುದ್ಧ ರೈತರು ಬೇಸರ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು.</p>.<p>ಸಾವಿರಾರು ರೈತರು, ಮಹಿಳೆಯರು, ಹಿರಿಯ ನಾಗರಿಕರು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರೂ ಅಧಿಕಾರಿಗಳು ಕನಿಷ್ಠ ಸೌಜನ್ಯವನ್ನು ತೋರುತ್ತಿಲ್ಲ. ಅಗತ್ಯವಿರುವ ತಯಾರಿಯನ್ನೂ ಮಾಡಿಕೊಂಡಿಲ್ಲ. ರೈತರ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ರೈತ ಕೆಂಪಣ್ಣ ಬೇಸರ ವ್ಯಕ್ತಪಡಿಸಿದರು.</p>.<p>ಸುಮಾರು 20 ಕಿ.ಮೀ ದೂರದಿಂದ ಬೆಳಿಗ್ಗೆ ಬಂದು ಕಾಯುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ನೊಂದಣಿ ಕಾರ್ಯ ಆಸ್ತವ್ಯಸ್ತವಾಗುತ್ತಿದೆ ರೈತ ಮಹಿಳೆ ಜಯಮ್ಮ ಬೇಸರ ವ್ಯಕ್ತಪಡಿಸಿದರು.</p>.<p>ಮಧ್ಯಾಹ್ನದ ವೇಳೆ ಸಮಸ್ಯೆಯನ್ನು ಅರಿತ ಅಧಿಕಾರಿಗಳು ಆಧಾರ್ ಕಾರ್ಡ್ ಹೊಂದಿದ್ದ ಸುಮಾರು 1,200 ರೈತರಿಗೆ ನೋಂದಣಿ ಕೂಪನ್ ನೀಡಿ ನಂತರ ಬಯೋಮೆಟ್ರಿಕ್ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದರಿಂದ ಪರಿಸ್ಥಿತಿ ತಿಳಿಯಾಯಿತು.</p>.<p>ಮೊದಲ ದಿನವಾಗಿದ್ದರಿಂದ ನೋಂದಣಿಗೆ ಪ್ರಾರಂಭದಲ್ಲಿ ಸ್ವಲ್ಪ ಅಡೆತಡೆ ಉಂಟಾಗಿತ್ತು. ನಾಳೆಯಿಂದ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ ಎಂದು ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>