<p><strong>ಕೊಡಿಗೇನಹಳ್ಳಿ</strong>: ಹೋಬಳಿಯ ಕಲಿದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 49ಕ್ಕೆ ಏರಿದ್ದ ಸೋಂಕಿತರ ಸಂಖ್ಯೆ ಕೋವಿಡ್ ಕಾರ್ಯಪಡೆಯ ಪರಿಶ್ರಮದಿಂದಾಗಿ 10ಕ್ಕೆ ಇಳಿದಿದೆ.</p>.<p>ಪಿಡಿಒ ಆರ್. ಹರೀಶ್ ಕುಮಾರ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾದಾಗ ನಮಗೆಲ್ಲ ಆತಂಕದ ಉಂಟಾಯಿತು. ಹಾಗಾಗಿ, ಈ ಕಠಿಣ ಪರಿಸ್ಥಿತಿ ಎದುರಿಸಲು ಕಾರ್ಯಪಡೆ ಸಭೆಯಲ್ಲಿ ಕಠಿಣ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿಸಿದರು.</p>.<p>ಐಸೋಲೇಶನ್ನಲ್ಲಿರುವ ಸೋಂಕಿತರ ಮನೆಗಳಿಗೆ ಭೇಟಿ ನೀಡಿದೆವು. ಅವರು ಎಲ್ಲೂ ಓಡಾಡದಂತೆ ಮತ್ತು ಅವರಿಗೆ ಬೇಕಾದ ಅಗತ್ಯ ವಸ್ತುಗಳು, ಮೆಡಿಕಲ್ ಕಿಟ್ ಒದಗಿಸುವ ಜವಾಬ್ದಾರಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಒಪ್ಪಿಸಲಾಯಿತು. ಇದರಿಂದ ನಿಯಂತ್ರಣಕ್ಕೆ ಬಂದಿದೆ ಎಂದರು.</p>.<p>ಉಪ ತಹಶೀಲ್ದಾರ್ ನವೀನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಧುಮತಿ, ಉಪಾಧ್ಯಕ್ಷ ಎ. ನಾರಾಯಣಸ್ವಾಮಿ, ಆರೋಗ್ಯ ಸಹಾಯಕಿಯರಾದ ಜಿ.ಎಂ. ವನಜಾಕ್ಷಿ, ಹರಿಣಿಶ್ರೀ, ಗ್ರಾಮ ಲೆಕ್ಕಿಗರಾದ ಮಹೇಶ್, ಗಂಗರಾಜು, ಅಂಜನಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಡಿಗೇನಹಳ್ಳಿ</strong>: ಹೋಬಳಿಯ ಕಲಿದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 49ಕ್ಕೆ ಏರಿದ್ದ ಸೋಂಕಿತರ ಸಂಖ್ಯೆ ಕೋವಿಡ್ ಕಾರ್ಯಪಡೆಯ ಪರಿಶ್ರಮದಿಂದಾಗಿ 10ಕ್ಕೆ ಇಳಿದಿದೆ.</p>.<p>ಪಿಡಿಒ ಆರ್. ಹರೀಶ್ ಕುಮಾರ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾದಾಗ ನಮಗೆಲ್ಲ ಆತಂಕದ ಉಂಟಾಯಿತು. ಹಾಗಾಗಿ, ಈ ಕಠಿಣ ಪರಿಸ್ಥಿತಿ ಎದುರಿಸಲು ಕಾರ್ಯಪಡೆ ಸಭೆಯಲ್ಲಿ ಕಠಿಣ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿಸಿದರು.</p>.<p>ಐಸೋಲೇಶನ್ನಲ್ಲಿರುವ ಸೋಂಕಿತರ ಮನೆಗಳಿಗೆ ಭೇಟಿ ನೀಡಿದೆವು. ಅವರು ಎಲ್ಲೂ ಓಡಾಡದಂತೆ ಮತ್ತು ಅವರಿಗೆ ಬೇಕಾದ ಅಗತ್ಯ ವಸ್ತುಗಳು, ಮೆಡಿಕಲ್ ಕಿಟ್ ಒದಗಿಸುವ ಜವಾಬ್ದಾರಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಒಪ್ಪಿಸಲಾಯಿತು. ಇದರಿಂದ ನಿಯಂತ್ರಣಕ್ಕೆ ಬಂದಿದೆ ಎಂದರು.</p>.<p>ಉಪ ತಹಶೀಲ್ದಾರ್ ನವೀನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಧುಮತಿ, ಉಪಾಧ್ಯಕ್ಷ ಎ. ನಾರಾಯಣಸ್ವಾಮಿ, ಆರೋಗ್ಯ ಸಹಾಯಕಿಯರಾದ ಜಿ.ಎಂ. ವನಜಾಕ್ಷಿ, ಹರಿಣಿಶ್ರೀ, ಗ್ರಾಮ ಲೆಕ್ಕಿಗರಾದ ಮಹೇಶ್, ಗಂಗರಾಜು, ಅಂಜನಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>