ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂಪುರದ ವ್ಯಕ್ತಿಗೆ ಸೋಂಕು; ಮಾಹಿತಿಗೆ ಮನವಿ

Last Updated 6 ಏಪ್ರಿಲ್ 2020, 17:06 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಆಂಧ್ರಪ್ರದೇಶದ ಹಿಂದೂಪುರದಲ್ಲಿ ಫಿಸಿಯೋಥೆರಪಿ ಕೆಲಸ ಮಾಡುತ್ತಿರುವ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ವ್ಯಕ್ತಿ ಬಳಿ ಚಿಕಿತ್ಸೆ ಪಡೆದಿರುವವರು ಕಡ್ಡಾಯವಾಗಿಮಧುಗಿರಿ ವೈದ್ಯಾಧಿಕಾರಿ ಅವರನ್ನು ಸಂಪರ್ಕಿಸಿ ಐಸೊಲೇಷನ್‌ಗೆ ಒಳಪಡುವಂತೆ ತಾಲ್ಲೂಕು ಆಡಳಿತ ಸೂಚಿಸಿದೆ.

ಅವರ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದಿರುವವರು ತಕ್ಷಣ ಸ್ವಯಂಪ್ರೇರಿತವಾಗಿ ಐಸೊಲೇಷನ್‌ಗೆ ಒಳಪಡಬೇಕು ಸಾಮಾಜಿಕ ಜಾಲತಾಣಗಳ ಮೂಲಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮಾಡಲಾಗುತ್ತಿದೆ.

‘ಅವರ ಚಿಕಿತ್ಸೆ ಪಡೆದಿರುವ ಐ.ಡಿ.ಹಳ್ಳಿಯ ವ್ಯಕ್ತಿಯೊಬ್ಬರನ್ನು ಗುರುತಿಸಿ ಕರೆತಂದಿದ್ದೇವೆ. ಜನರು ಸಹ ಈ ಬಗ್ಗೆ ತಿಳಿದಿದ್ದರೆ ಮಾಹಿತಿ ನೀಡಬೇಕು’ ಎಂದು ತಹಶೀಲ್ದಾರ್ ವಿಶ್ವನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT