‘ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ಅಥವಾ ಕ್ವಾರಂಟೈನ್ ಕೇಂದ್ರಕ್ಕೆ ಕರೆದೊಯ್ಯುವ ವ್ಯವಸ್ಥೆ ಅವೈಜ್ಞಾನಿಕ ಮತ್ತು ಅಮಾನವೀಯವಾಗಿದೆ. ಇದು ಬದಲಾಗಬೇಕು. ಕೋವಿಡ್ ಪರೀಕ್ಷಾ ವರದಿ ಬಂದ ಕೆಲ ಸಮಯಕ್ಕೆ ಪೊಲೀಸರೊಂದಿಗೆ ಆಂಬುಲೆನ್ಸ್ನಲ್ಲಿ ಬರುವ ಸಿಬ್ಬಂದಿ, ಸೋಂಕಿತ ಮತ್ತು ಕುಟುಂಬಕ್ಕೆ ಸೂಕ್ತ ಮಾಹಿತಿ ಮತ್ತು ಆತ್ಮಸ್ಥೈರ್ಯ ತುಂಬದೆ, ಕೈದಿಗಳಂತೆ ಕರೆದೊಯ್ಯುತ್ತಾರೆ’ ಎನ್ನುವುದು ಅವರ ಅನುಭವದ ನುಡಿ.