ತಾಲ್ಲೂಕಿನ ಅಮೃತೂರು ಹೋಬಳಿಯ ಹೊಸಪಾಳ್ಯದ ನಾರಾಯಣ್ಣಪ್ಪ (67) ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮಂಗಳವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದಾಗ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ತುಮಕೂರಿಗೆ ಸಾಗಿಸುವ ಮೊದಲೆ ಮೃತಪಟ್ಟಿದ್ದಾರೆ. ಅವರ ಮಗನಿಗೂ ಸೋಂಕು ದೃಢಪಟ್ಟಿದೆ. ಸಂಜೆ ಹೊಸಪಾಳ್ಯದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ವೈದ್ಯಾಧಿಕಾರಿ ಜಗದೀಶ್ ತಿಳಿಸಿದ್ದಾರೆ.