<p><strong>ಚಿಕ್ಕನಾಯಕನಹಳ್ಳಿ</strong>: ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಅವರ 43 ಮೇಕೆಗಳನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಮೇಕೆಗಳಿಗೂ ಕೊರೊನಾ ಪರೀಕ್ಷೆ ಮಾಡಿಸುವಂತೆ ಚಿಕ್ಕನಾಯಕನಹಳ್ಳಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೋಮವಾರ ಜಿಲ್ಲಾಡಳಿತ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಜ್ವರದಿಂದ ಬಳಲುತ್ತಿದ್ದ ಗೊಲ್ಲರಹಟ್ಟಿಯ ವ್ಯಕ್ತಿಯನ್ನು ಆತನ ಸ್ನೇಹಿತರೊಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಜೂ.23ರಂದು ಆ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗಿತ್ತು. ಈ ನಡುವೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸ್ನೇಹಿತನ ಮನೆಯಲ್ಲಿ ಐದು ಮೇಕೆಗಳು ಏಕಾಏಕಿ ಮೃತಪಟ್ಟಿವೆ. ಅವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಆರೋಗ್ಯವಾಗಿದ್ದ ಮೇಕೆಗಳ ಸಾವು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.</p>.<p>ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ಮರುದಿನವೇ ಅವರ ಸಂಬಂಧಿಕರು 43 ಮೇಕೆಗಳನ್ನು ಜಕ್ಕನಹಳ್ಳಿಗೆ ಕೊಂಡೊಯ್ದಿದ್ದಾರೆ. ಅಲ್ಲಿ ಅವುಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.</p>.<p>‘ಇಲ್ಲಿಯವರೆಗೂ ಕೊರೊನಾ ಕುರಿ, ಮೇಕೆಗಳ ಮೂಲಕ ಹರಡಿದೆ ಎಂಬುದಕ್ಕೆ ಆಧಾರವಿಲ್ಲ. ಆದರೂ ಕೊರೊನಾ ವಿಭಿನ್ನ ಸ್ವರೂಪದಲ್ಲಿರುವುದರಿಂದ ಮೇಕೆಗಳ ಗಂಟಲು ಸ್ರಾವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ. ಅಲ್ಲಿಯವರೆಗೂ ಅವುಗಳನ್ನು ಪ್ರತ್ಯೇಕವಾಗಿಯೇ ಇರಿಸಲು ಕ್ರಮಕೈಗೊಳ್ಳಿ’ ಎಂದು ಮಾಧುಸ್ವಾಮಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ</strong>: ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಅವರ 43 ಮೇಕೆಗಳನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಮೇಕೆಗಳಿಗೂ ಕೊರೊನಾ ಪರೀಕ್ಷೆ ಮಾಡಿಸುವಂತೆ ಚಿಕ್ಕನಾಯಕನಹಳ್ಳಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೋಮವಾರ ಜಿಲ್ಲಾಡಳಿತ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಜ್ವರದಿಂದ ಬಳಲುತ್ತಿದ್ದ ಗೊಲ್ಲರಹಟ್ಟಿಯ ವ್ಯಕ್ತಿಯನ್ನು ಆತನ ಸ್ನೇಹಿತರೊಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಜೂ.23ರಂದು ಆ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗಿತ್ತು. ಈ ನಡುವೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸ್ನೇಹಿತನ ಮನೆಯಲ್ಲಿ ಐದು ಮೇಕೆಗಳು ಏಕಾಏಕಿ ಮೃತಪಟ್ಟಿವೆ. ಅವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಆರೋಗ್ಯವಾಗಿದ್ದ ಮೇಕೆಗಳ ಸಾವು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.</p>.<p>ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ಮರುದಿನವೇ ಅವರ ಸಂಬಂಧಿಕರು 43 ಮೇಕೆಗಳನ್ನು ಜಕ್ಕನಹಳ್ಳಿಗೆ ಕೊಂಡೊಯ್ದಿದ್ದಾರೆ. ಅಲ್ಲಿ ಅವುಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.</p>.<p>‘ಇಲ್ಲಿಯವರೆಗೂ ಕೊರೊನಾ ಕುರಿ, ಮೇಕೆಗಳ ಮೂಲಕ ಹರಡಿದೆ ಎಂಬುದಕ್ಕೆ ಆಧಾರವಿಲ್ಲ. ಆದರೂ ಕೊರೊನಾ ವಿಭಿನ್ನ ಸ್ವರೂಪದಲ್ಲಿರುವುದರಿಂದ ಮೇಕೆಗಳ ಗಂಟಲು ಸ್ರಾವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ. ಅಲ್ಲಿಯವರೆಗೂ ಅವುಗಳನ್ನು ಪ್ರತ್ಯೇಕವಾಗಿಯೇ ಇರಿಸಲು ಕ್ರಮಕೈಗೊಳ್ಳಿ’ ಎಂದು ಮಾಧುಸ್ವಾಮಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>