ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಜಿಲ್ಲೆಯಲ್ಲಿ ಆತಂಕವಿಲ್ಲ

Last Updated 7 ಏಪ್ರಿಲ್ 2020, 16:06 IST
ಅಕ್ಷರ ಗಾತ್ರ

ತುಮಕೂರು: ಕೊರೊನಾ ಸೋಂಕು ಪತ್ತೆಗಾಗಿ ಏ. 7ರ ವರೆಗೂ 181 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 175 ಮಾದರಿಗಳಲ್ಲಿ ಸೋಂಕಿನ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಂದ್ರಿಕಾ ತಿಳಿಸಿದ್ದಾರೆ.

ಕೋವಿಡ್‌-19 ಕಾಯಿಲೆ ತಡೆಗಟ್ಟಲು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾದಲ್ಲಿಡಲಾಗಿದೆ. ಈ ಪೈಕಿ 233 ಮಂದಿಯನ್ನು ಹೋಂ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ. 130 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದೆ.

ಕೋವಿಡ್‌ನಿಂದ ಶಿರಾದ ವ್ಯಕ್ತಿ ಮೃತಪಟ್ಟಿದ್ದು, ಆತನ ಪುತ್ರನಿಗೆ ಕೊರೊನಾ ಸೋಂಕು ತಗುಲಿದೆ. ಬಾಲಕ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾನೆ. ಈ ಎರಡು ಪ್ರಕರಣ ಬಿಟ್ಟರೆ ಜಿಲ್ಲೆಯಲ್ಲಿ ಹೊಸದಾಗಿ ಯಾರಿಗೂ ಸೋಂಕು ತಗುಲಿಲ್ಲ. ಹಾಗಾಗಿ ಜನರಲ್ಲಿ ಮನೆಮಾಡಿದ್ದ ಆತಂಕ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT