<p><strong>ಶಿರಾ: </strong>‘ಅನ್ನಭಾಗ್ಯ ಯೋಜನೆಯಲ್ಲಿ ಹಂದಿಗಳು ತಿನ್ನದಂತಹ ಅಕ್ಕಿ, ರಾಗಿಯನ್ನು ನೀಡಿ, ಬಡಜನರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು.</p>.<p>ತಾಲ್ಲೂಕಿನ ಬಾಲೇನಹಳ್ಳಿ, ಚಿಕ್ಕದಾಸರಹಳ್ಳಿ, ಕಳ್ಳಂಬೆಳ್ಳ, ಮರಳಪ್ಪನಹಳ್ಳಿಯಲ್ಲಿ ರೋಡ್ ಷೊ ನಡೆಸಿ ಮತಯಾಚಿಸಿದರು.</p>.<p>‘ಹಸಿವಿನಿಂದ ಯಾರು ಸಂಕಷ್ಟ ಪಡಬಾರದು ಎಂದು ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ 7 ಕೆ.ಜಿ ಅಕ್ಕಿ ನೀಡುತ್ತಿತ್ತು. ಬಿಜೆಪಿ ಸರ್ಕಾರ ಅದರಲ್ಲಿ 2 ಕೆ.ಜಿ ಕಡಿತ ಮಾಡಿದೆ. ಅದೂ ತಿನ್ನಲು ಯೋಗ್ಯವಾಗಿಲ್ಲ. ಅನ್ನಭಾಗ್ಯದಲ್ಲೂ ಭ್ರಷ್ಟಾಚಾರ ನಡೆಸುತ್ತಿರುವವರಿಗೆ ಜನರು ತಕ್ಕ ಉತ್ತರ ನೀಡಬೇಕು’ ಎಂದರು.</p>.<p>ಶಾಸಕ ಎಂ.ಬಿ.ಪಾಟೀಲ ಮಾತನಾಡಿ, ‘ಜಯಚಂದ್ರ ಅವರು ಕೃಷ್ಣ ಹಾಗೂ ಕಾವೇರಿ ನದಿ ನೀರು ತಂದು ಈ ಭಾಗದ ಜನರ ಬದುಕು ಹಸನು ಮಾಡಿದ್ದಾರೆ. ಇವರ ಜನಪರ ಕಾಳಜಿ ಹಾಗೂ ಇಚ್ಛಾಶಕ್ತಿ ಗುರುತಿಸಿ ಮತ ನೀಡಬೇಕು’ ಎಂದರು.</p>.<p>ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ‘ಜಯಚಂದ್ರ ಆಯ್ಕೆಯಿಂದ ಶಿರಾ ಕ್ಷೇತ್ರಕ್ಕೆ ಮಾತ್ರ ಲಾಭವಾಗುವುದಿಲ್ಲ. ವಿಧಾನಸಭೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡುವ ಮೂಲಕ ರಾಜ್ಯಕ್ಕೆ ಶಕ್ತಿಯಾಗುತ್ತಾರೆ’ ಎಂದರು.</p>.<p>ಅಭ್ಯರ್ಥಿ ಟಿ.ಬಿ.ಜಯಚಂದ್ರ, ಶಾಸಕ ಡಾ.ಯತೀಂದ್ರ, ಬಾಲೇನಹಳ್ಳಿ ಪ್ರಕಾಶ್, ಅರೇಹಳ್ಳಿ ರಮೇಶ್, ಹೆಂಜಾರಪ್ಪ, ಪರ್ವತಪ್ಪ, ದಿವಾಕರ್ ಗೌಡ, ಮಾರೇಗೌಡ, ಡಾ.ಮನು ಪಾಟೀಲ್, ಕಾಲೇಗೌಡ, ಅಭಿ,<br />ಶ್ರೀರಂಗ, ನಾರಾಯಣಪ್ಪ, ಮಾರೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong>‘ಅನ್ನಭಾಗ್ಯ ಯೋಜನೆಯಲ್ಲಿ ಹಂದಿಗಳು ತಿನ್ನದಂತಹ ಅಕ್ಕಿ, ರಾಗಿಯನ್ನು ನೀಡಿ, ಬಡಜನರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು.</p>.<p>ತಾಲ್ಲೂಕಿನ ಬಾಲೇನಹಳ್ಳಿ, ಚಿಕ್ಕದಾಸರಹಳ್ಳಿ, ಕಳ್ಳಂಬೆಳ್ಳ, ಮರಳಪ್ಪನಹಳ್ಳಿಯಲ್ಲಿ ರೋಡ್ ಷೊ ನಡೆಸಿ ಮತಯಾಚಿಸಿದರು.</p>.<p>‘ಹಸಿವಿನಿಂದ ಯಾರು ಸಂಕಷ್ಟ ಪಡಬಾರದು ಎಂದು ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ 7 ಕೆ.ಜಿ ಅಕ್ಕಿ ನೀಡುತ್ತಿತ್ತು. ಬಿಜೆಪಿ ಸರ್ಕಾರ ಅದರಲ್ಲಿ 2 ಕೆ.ಜಿ ಕಡಿತ ಮಾಡಿದೆ. ಅದೂ ತಿನ್ನಲು ಯೋಗ್ಯವಾಗಿಲ್ಲ. ಅನ್ನಭಾಗ್ಯದಲ್ಲೂ ಭ್ರಷ್ಟಾಚಾರ ನಡೆಸುತ್ತಿರುವವರಿಗೆ ಜನರು ತಕ್ಕ ಉತ್ತರ ನೀಡಬೇಕು’ ಎಂದರು.</p>.<p>ಶಾಸಕ ಎಂ.ಬಿ.ಪಾಟೀಲ ಮಾತನಾಡಿ, ‘ಜಯಚಂದ್ರ ಅವರು ಕೃಷ್ಣ ಹಾಗೂ ಕಾವೇರಿ ನದಿ ನೀರು ತಂದು ಈ ಭಾಗದ ಜನರ ಬದುಕು ಹಸನು ಮಾಡಿದ್ದಾರೆ. ಇವರ ಜನಪರ ಕಾಳಜಿ ಹಾಗೂ ಇಚ್ಛಾಶಕ್ತಿ ಗುರುತಿಸಿ ಮತ ನೀಡಬೇಕು’ ಎಂದರು.</p>.<p>ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ‘ಜಯಚಂದ್ರ ಆಯ್ಕೆಯಿಂದ ಶಿರಾ ಕ್ಷೇತ್ರಕ್ಕೆ ಮಾತ್ರ ಲಾಭವಾಗುವುದಿಲ್ಲ. ವಿಧಾನಸಭೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡುವ ಮೂಲಕ ರಾಜ್ಯಕ್ಕೆ ಶಕ್ತಿಯಾಗುತ್ತಾರೆ’ ಎಂದರು.</p>.<p>ಅಭ್ಯರ್ಥಿ ಟಿ.ಬಿ.ಜಯಚಂದ್ರ, ಶಾಸಕ ಡಾ.ಯತೀಂದ್ರ, ಬಾಲೇನಹಳ್ಳಿ ಪ್ರಕಾಶ್, ಅರೇಹಳ್ಳಿ ರಮೇಶ್, ಹೆಂಜಾರಪ್ಪ, ಪರ್ವತಪ್ಪ, ದಿವಾಕರ್ ಗೌಡ, ಮಾರೇಗೌಡ, ಡಾ.ಮನು ಪಾಟೀಲ್, ಕಾಲೇಗೌಡ, ಅಭಿ,<br />ಶ್ರೀರಂಗ, ನಾರಾಯಣಪ್ಪ, ಮಾರೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>