ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ಆರಂಭವಾಗಿವೆ.ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಮಠಕ್ಕೆ ಆಗಮಿಸುತ್ತಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಇತರ ಮುಖಂಡರೂ ಭಾಗವಹಿಸಲಿದ್ದಾರೆ.
ಗಣ್ಯರ ಸ್ವಾಗತಕ್ಕೆ ಸಿದ್ಧತೆ ಜೋರು ಮಠಕ್ಕೆ ಭೇಟಿ ನೀಡುವ ಗಣ್ಯರನ್ನು ಕುಂಭಗಳ ಮೆರವಣಿಗೆಯ ಮೂಲಕ ಸ್ವಾಗತಿಸಲು ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಿದ್ಧತೆ ಕೈಗೊಂಡಿದ್ದಾರೆ.
115 ಕುಂಭಗಳ ಮೆರವಣಿಗೆಯ ಮೂಲಕ ಅತಿಥಿಗಳ ಸ್ವಾಗತಕ್ಕೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಪ್ರತಿವರ್ಷ ಶಿವಕುಮಾರ ಸ್ವಾಮೀಜಿ ಹುಟ್ಟು ಹಬ್ಬದ ದಿನದಂದು ಕಳಸಾ ಕುಂಭಗಳ ವ್ಯವಸ್ಥೆ ಮಾಡಲಾಗುತ್ತಿದೆ. ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ರಾಜ ಸುಲೋಚನಾ ಹೇಳಿದರು.