ನಗರ ಪ್ರವೇಶಿಸುವ ಹಾಗೂ ನಗರದಿಂದ ಹೊರಗೆ ಹೋಗುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಂತರ ಜಿಲ್ಲೆಗಳನ್ನು ಸಂಪರ್ಕಿಸುವ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ನಿರ್ಮಿಸಿದ್ದು, ಹೊರ ಜಿಲ್ಲೆಯ ವಾಹನಗಳು ಜಿಲ್ಲೆ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಜಿಲ್ಲೆಯಿಂದಲೂ ಹೊರಕ್ಕೆ ಹೋಗಲು ಬಿಡುತ್ತಿಲ್ಲ. ಅಗತ್ಯ ಸೇವೆ ಒದಗಿಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆ.