<p><strong>ತುಮಕೂರು: </strong>ಜಿಲ್ಲೆಯಲ್ಲಿ ಕೋವಿಡ್–19 ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದರ ಜತೆಗೆ ಮಕ್ಕಳಿಗಾಗಿ ಕೋವಿಡ್ ಆರೈಕೆ ಕೇಂದ್ರ ತೆರೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.</p>.<p>ಮುಂಬರುವ ಕೋವಿಡ್ ಅಲೆ ಎದುರಿಸಲು ಸಜ್ಜಾಗುವ ಸಂಬಂಧ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಮೂರನೇ ಅಲೆ ಬಂದರೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದ್ದು, ಅದಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.</p>.<p>ಹೆಣ್ಣು, ಗಂಡು ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯಬೇಕು. 10 ವರ್ಷದ ಒಳಗಿನ ಮಕ್ಕಳ ತಾಯಂದಿರು ಉಳಿದುಕೊಂಡು ಮಕ್ಕಳನ್ನು ನೋಡಿಕೊಳ್ಳಲು ವ್ಯವಸ್ಥೆ ಮಾಡಬೇಕು. ಗರ್ಭಿಣಿಯರು, ಬಾಣಂತಿ, ಹಿರಿಯ ನಾಗರಿಕರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ<br />ನೀಡಿದರು.</p>.<p class="Subhead">ಪ್ರಸ್ತುತ ಕೊರೊನಾ ಸೋಂಕಿಗೆ ಒಳಗಾಗಿರುವ ಮಕ್ಕಳನ್ನು ಕೋವಿಡ್ ಸೆಂಟರ್ಗೆ ಕರೆತಂದು ಆರೈಕೆ ಮಾಡಬೇಕು. ಈ ಬಗ್ಗೆ ಪಾಲಕರಿಗೂ ಜಾಗೃತಿಮೂಡಿಸಬೇಕು. ಕೋವಿಡ್ ಸೆಂಟರ್ನಲ್ಲಿ ಕೆಲ ದಿನಗಳು ಇದ್ದು ನಂತರ ಮನೆಗಳಿಗೆ ಹೋದರೆ ಮಕ್ಕಳು, ಪೋಷಕರಿಗೂ ಆತ್ಮಸ್ಥೈರ್ಯ ಬರುತ್ತದೆ ಎಂದರು.</p>.<p class="Subhead">ಕ್ರಮದ ಎಚ್ಚರಿಕೆ: ಸಹಾಯವಾಣಿ 1098ಕ್ಕೆ ಕರೆ ಮಾಡಿದರೆ ಸರಿಯಾಗಿ ಸ್ಪಂದಿಸುವುದಿಲ್ಲ. ಕೆಲವೊಮ್ಮೆ ಯಾರೂ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಸಾಕಷ್ಟು ದೂರುಗಳು ಬಂದಿವೆ. ಮುಂದೆ ಈ ರೀತಿ ದೂರಗಳು ಬರದಂತೆ ನೋಡಿಕೊಳ್ಳಬೇಕು. ಕರೆ ಮಾಡಿದವರಿಗೆ ಸರಿಯಾಗಿ ಸ್ಪಂದಿಸಿ ನೆರವು ನೀಡಬೇಕು. ಮತ್ತೆ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು 1098 ಸಿಬ್ಬಂದಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆನೀಡಿದರು.</p>.<p>ಈಗಾಗಲೇ ಕೋವಿಡ್ನಿಂದ ಇದ್ದ ಒಬ್ಬ ಪೋಷಕರು ಅಥವಾ ಇಬ್ಬರೂ ಪೋಷಕರು ಮೃತಪಟ್ಟು ಮಕ್ಕಳು ಅನಾಥವಾಗಿದ್ದರೆ ತಕ್ಷಣ ಅಧಿಕಾರಿಗಳು ಸ್ಪಂದಿಸಬೇಕು. ಸರ್ಕಾರದ ಹೊಸ ನಿಯಮದಂತೆ ಎಲ್ಲಾ ವ್ಯವಸ್ಥೆಮಾಡಬೇಕು ಎಂದರು. ಈ ಸಂದರ್ಭದಲ್ಲಿ ಅಧಿಕಾರಿಗಳು ನೀಡಿದ ಅಂಕಿ ಸಂಖ್ಯೆಯಲ್ಲಿ ವ್ಯತ್ಯಾಸ ಇರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ವ್ಯತ್ಯಾಸವಾಗಿದ್ದರೆ ತಕ್ಷಣವೇ ಸರಿಪಡಿಸಬೇಕು. ಯಾವೊಂದು ಮಗುವೂ ಈ ಸೌಲಭ್ಯದಿಂದ ವಂಚಿತವಾಗಬಾರದು ಎಂದು ಹೇಳಿದರು.</p>.<p>ಕೋವಿಡ್ ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ 7,659 ಮಕ್ಕಳಿಗೆ ಸೋಂಕು ತಗುಲಿತ್ತು. ಬುದ್ಧಿಮಾಂದ್ಯ ಮಗು ಸಾವನ್ನಪ್ಪಿದ್ದು ಬಿಟ್ಟರೆ ಯಾವ ಮಕ್ಕಳೂ ಸಾವನ್ನಪ್ಪಿಲ್ಲ ಎಂದು ಡಿಎಚ್ಒ ಡಾ.ನಾಗೇಂದ್ರಪ್ಪ ತಿಳಿಸಿದರು.</p>.<p>ಪೊಲಿಯೋ ಮಾದರಿಯಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಬೇಕು. ಮಕ್ಕಳಿಗೆ ಕಪ್ಪು ಶಿಲೀಂಧ್ರ ಬಂದರೆ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಬೇಕು, ಅಗತ್ಯ ಔಷಧಿ ಲಭ್ಯವಾಗುವಂತೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜಿಲ್ಲೆಯಲ್ಲಿ ಕೋವಿಡ್–19 ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದರ ಜತೆಗೆ ಮಕ್ಕಳಿಗಾಗಿ ಕೋವಿಡ್ ಆರೈಕೆ ಕೇಂದ್ರ ತೆರೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.</p>.<p>ಮುಂಬರುವ ಕೋವಿಡ್ ಅಲೆ ಎದುರಿಸಲು ಸಜ್ಜಾಗುವ ಸಂಬಂಧ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಮೂರನೇ ಅಲೆ ಬಂದರೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದ್ದು, ಅದಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.</p>.<p>ಹೆಣ್ಣು, ಗಂಡು ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯಬೇಕು. 10 ವರ್ಷದ ಒಳಗಿನ ಮಕ್ಕಳ ತಾಯಂದಿರು ಉಳಿದುಕೊಂಡು ಮಕ್ಕಳನ್ನು ನೋಡಿಕೊಳ್ಳಲು ವ್ಯವಸ್ಥೆ ಮಾಡಬೇಕು. ಗರ್ಭಿಣಿಯರು, ಬಾಣಂತಿ, ಹಿರಿಯ ನಾಗರಿಕರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ<br />ನೀಡಿದರು.</p>.<p class="Subhead">ಪ್ರಸ್ತುತ ಕೊರೊನಾ ಸೋಂಕಿಗೆ ಒಳಗಾಗಿರುವ ಮಕ್ಕಳನ್ನು ಕೋವಿಡ್ ಸೆಂಟರ್ಗೆ ಕರೆತಂದು ಆರೈಕೆ ಮಾಡಬೇಕು. ಈ ಬಗ್ಗೆ ಪಾಲಕರಿಗೂ ಜಾಗೃತಿಮೂಡಿಸಬೇಕು. ಕೋವಿಡ್ ಸೆಂಟರ್ನಲ್ಲಿ ಕೆಲ ದಿನಗಳು ಇದ್ದು ನಂತರ ಮನೆಗಳಿಗೆ ಹೋದರೆ ಮಕ್ಕಳು, ಪೋಷಕರಿಗೂ ಆತ್ಮಸ್ಥೈರ್ಯ ಬರುತ್ತದೆ ಎಂದರು.</p>.<p class="Subhead">ಕ್ರಮದ ಎಚ್ಚರಿಕೆ: ಸಹಾಯವಾಣಿ 1098ಕ್ಕೆ ಕರೆ ಮಾಡಿದರೆ ಸರಿಯಾಗಿ ಸ್ಪಂದಿಸುವುದಿಲ್ಲ. ಕೆಲವೊಮ್ಮೆ ಯಾರೂ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಸಾಕಷ್ಟು ದೂರುಗಳು ಬಂದಿವೆ. ಮುಂದೆ ಈ ರೀತಿ ದೂರಗಳು ಬರದಂತೆ ನೋಡಿಕೊಳ್ಳಬೇಕು. ಕರೆ ಮಾಡಿದವರಿಗೆ ಸರಿಯಾಗಿ ಸ್ಪಂದಿಸಿ ನೆರವು ನೀಡಬೇಕು. ಮತ್ತೆ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು 1098 ಸಿಬ್ಬಂದಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆನೀಡಿದರು.</p>.<p>ಈಗಾಗಲೇ ಕೋವಿಡ್ನಿಂದ ಇದ್ದ ಒಬ್ಬ ಪೋಷಕರು ಅಥವಾ ಇಬ್ಬರೂ ಪೋಷಕರು ಮೃತಪಟ್ಟು ಮಕ್ಕಳು ಅನಾಥವಾಗಿದ್ದರೆ ತಕ್ಷಣ ಅಧಿಕಾರಿಗಳು ಸ್ಪಂದಿಸಬೇಕು. ಸರ್ಕಾರದ ಹೊಸ ನಿಯಮದಂತೆ ಎಲ್ಲಾ ವ್ಯವಸ್ಥೆಮಾಡಬೇಕು ಎಂದರು. ಈ ಸಂದರ್ಭದಲ್ಲಿ ಅಧಿಕಾರಿಗಳು ನೀಡಿದ ಅಂಕಿ ಸಂಖ್ಯೆಯಲ್ಲಿ ವ್ಯತ್ಯಾಸ ಇರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ವ್ಯತ್ಯಾಸವಾಗಿದ್ದರೆ ತಕ್ಷಣವೇ ಸರಿಪಡಿಸಬೇಕು. ಯಾವೊಂದು ಮಗುವೂ ಈ ಸೌಲಭ್ಯದಿಂದ ವಂಚಿತವಾಗಬಾರದು ಎಂದು ಹೇಳಿದರು.</p>.<p>ಕೋವಿಡ್ ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ 7,659 ಮಕ್ಕಳಿಗೆ ಸೋಂಕು ತಗುಲಿತ್ತು. ಬುದ್ಧಿಮಾಂದ್ಯ ಮಗು ಸಾವನ್ನಪ್ಪಿದ್ದು ಬಿಟ್ಟರೆ ಯಾವ ಮಕ್ಕಳೂ ಸಾವನ್ನಪ್ಪಿಲ್ಲ ಎಂದು ಡಿಎಚ್ಒ ಡಾ.ನಾಗೇಂದ್ರಪ್ಪ ತಿಳಿಸಿದರು.</p>.<p>ಪೊಲಿಯೋ ಮಾದರಿಯಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಬೇಕು. ಮಕ್ಕಳಿಗೆ ಕಪ್ಪು ಶಿಲೀಂಧ್ರ ಬಂದರೆ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಬೇಕು, ಅಗತ್ಯ ಔಷಧಿ ಲಭ್ಯವಾಗುವಂತೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>