‘ಯುವತಿಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕ್ವಾರಂಟೈನ್ ಮುದ್ರೆ ಹಾಕಿದ್ದಾರೆ. ನಮ್ಮ ತಂಡ ಸಹ ಪರೀಕ್ಷೆ ನಡೆಸಿದ್ದು, ಕೊರೊನಾ ವೈರಸ್ನ ಯಾವುದೇ ಲಕ್ಷಣ ಕಂಡು ಬಂದಿಲ್ಲ. ಮುಂಜಾಗ್ರತೆ ಕ್ರಮವಾಗಿ ಮನೆಯಲ್ಲಿ ಯಾರ ಸಂಪರ್ಕಕ್ಕೂ ಒಳಪಡಬಾರದು ಹಾಗೂ ಹೊರಗೆ ಹೋಗದಂತೆ ತಿಳಿಸಲಾಗಿದೆ. ಮುಂದಿನ 14 ದಿನ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.