<p><strong>ತುಮಕೂರು: </strong>ರಾಜ್ಯದಲ್ಲಿ ಕಳೆದ ವರ್ಷ 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಕೋವಿಡ್–19ನಿಂದ ಹಿನ್ನಡೆಯಾಗಿದ್ದು, 3 ಲಕ್ಷ ಮನೆ ನಿರ್ಮಾಣ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಶನಿವಾರ ತಿಳಿಸಿದರು.</p>.<p>ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಭೇಟಿಮಾಡಿ ಗುಪ್ತ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3 ಲಕ್ಷ ಮನೆಗಳನ್ನು ನಿರ್ಮಿಸಿ ನಗರ ಹಾಗೂ ಗ್ರಾಮೀಣ ಭಾಗದ ವಸತಿ ರಹಿತರಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಆಡಳಿತ ಯಂತ್ರ ಕುಸಿದಿಲ್ಲ. ಬಿಜೆಪಿ ಸರ್ಕಾರ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತರಾದ ಶಿಲ್ಪನಾಗ್ ವಿಚಾರದಲ್ಲಿ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಕ್ರಮ ತೆಗೆದುಕೊಳ್ಳುತ್ತಾರೆ’ ಎಂದರು.</p>.<p>ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ– ಮೂರು ಪಕ್ಷಗಳ ಸರ್ಕಾರ ಇದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ಕೊಡಲಿಲ್ಲ. ಯಾವ ಅರ್ಥದಲ್ಲಿ ಇಂತಹ ಹೇಳಿಕೆ ಕೊಟ್ಟಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.</p>.<p><strong>ಗುಪ್ತ ಮಾತುಕತೆ: </strong>ಸ್ವಾಮೀಜಿ ಜತೆಗೆ ಸುಮಾರು 40 ನಿಮಿಷಗಳ ಕಾಲ ಸೋಮಣ್ಣ ಗೌಪ್ಯ ಚರ್ಚೆ ನಡೆಸಿದರು. ಈ ಸಮಯದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆಗಳು ನಡೆದಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೆ ಳಿಸಬೇಕು ಎಂದು ಪಕ್ಷದಲ್ಲೇ ಕೆಲವರು ಒತ್ತಡ ಹಾಕುತ್ತಿದ್ದು, ಈ ವಿಚಾರ ಪ್ರಮುಖವಾಗಿ ಚರ್ಚೆಗೆ ಬಂದು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ರಾಜ್ಯದಲ್ಲಿ ಕಳೆದ ವರ್ಷ 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಕೋವಿಡ್–19ನಿಂದ ಹಿನ್ನಡೆಯಾಗಿದ್ದು, 3 ಲಕ್ಷ ಮನೆ ನಿರ್ಮಾಣ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಶನಿವಾರ ತಿಳಿಸಿದರು.</p>.<p>ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಭೇಟಿಮಾಡಿ ಗುಪ್ತ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3 ಲಕ್ಷ ಮನೆಗಳನ್ನು ನಿರ್ಮಿಸಿ ನಗರ ಹಾಗೂ ಗ್ರಾಮೀಣ ಭಾಗದ ವಸತಿ ರಹಿತರಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಆಡಳಿತ ಯಂತ್ರ ಕುಸಿದಿಲ್ಲ. ಬಿಜೆಪಿ ಸರ್ಕಾರ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತರಾದ ಶಿಲ್ಪನಾಗ್ ವಿಚಾರದಲ್ಲಿ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಕ್ರಮ ತೆಗೆದುಕೊಳ್ಳುತ್ತಾರೆ’ ಎಂದರು.</p>.<p>ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ– ಮೂರು ಪಕ್ಷಗಳ ಸರ್ಕಾರ ಇದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ಕೊಡಲಿಲ್ಲ. ಯಾವ ಅರ್ಥದಲ್ಲಿ ಇಂತಹ ಹೇಳಿಕೆ ಕೊಟ್ಟಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.</p>.<p><strong>ಗುಪ್ತ ಮಾತುಕತೆ: </strong>ಸ್ವಾಮೀಜಿ ಜತೆಗೆ ಸುಮಾರು 40 ನಿಮಿಷಗಳ ಕಾಲ ಸೋಮಣ್ಣ ಗೌಪ್ಯ ಚರ್ಚೆ ನಡೆಸಿದರು. ಈ ಸಮಯದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆಗಳು ನಡೆದಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೆ ಳಿಸಬೇಕು ಎಂದು ಪಕ್ಷದಲ್ಲೇ ಕೆಲವರು ಒತ್ತಡ ಹಾಕುತ್ತಿದ್ದು, ಈ ವಿಚಾರ ಪ್ರಮುಖವಾಗಿ ಚರ್ಚೆಗೆ ಬಂದು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>