<p><strong>ಕುಣಿಗಲ್</strong>: ‘ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ಹೆಚ್ಚುತ್ತಿದ್ದು, ಸೋಂಕು ಹರಡುವುದನ್ನು ತಡೆಯಲು ಗ್ರಾಮಪಂಚಾಯಿತಿ ಪಿಡಿಒ ಸಹಕರಿಸುತ್ತಿಲ್ಲ, ಬಿಲ್ ಮಾಡುವ ದಂಧೆಯಲ್ಲಿ ನಿರತರಾಗಿದ್ದಾರೆ’ ಎಂದು ಶಾಸಕ ಡಾ.ರಂಗನಾಥ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೋವಿಡ್ ನಿಯಂತ್ರಣ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನ 36 ಗ್ರಾಮಪಂಚಾಯಿತಿಗಳಲ್ಲಿ 4 ಸಾವಿರ ಸೋಂಕಿತರು ಇದ್ದಾರೆ. 200 ಮಂದಿ ಮೃತರಾಗಿದ್ದಾರೆ. ಯಾವುದೇ ಪಿಡಿಒ ಆಗಲಿ, ಸಿಬ್ಬಂದಿಯಾಗಲಿ, ಸೋಂಕಿತರನ್ನು ಭೇಟಿ ಮಾಡಿ ಸ್ಥೈರ್ಯ ತುಂಬಿಲ್ಲ ಎಂದರು.</p>.<p>ಪರಿಸ್ಥಿತಿ ಗಂಭೀರವಾಗುತ್ತಿದ್ದೆ. ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಲು ಹಾಗೂ ವಲಸಿಗರನ್ನು ತಡೆಯಲು ಸೂಚಿಸಿದರು.</p>.<p>ತಾಲ್ಲೂಕಿನಲ್ಲಿ 850 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಅವರಿಗೂ ಪಡಿತರ ವಿತರಣೆಗೆ ಕ್ರಮಕೈಗೊಳ್ಳಲು ಸೂಚಿಸಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ನಿಯೋಜನೆಗೊಂಡಿರುವ ನೋಡಲ್ ಅಧಿಕಾರಿಗಳು ಕಚೇರಿ ಬಿಟ್ಟು ಗ್ರಾಮೀಣ ಪ್ರದೇಶಕ್ಕೆ ತೆರಳಿ ವಿಶೇಷ ಕಾರ್ಯತಂತ್ರ ರೂಪಿಸಿ ಸೋಂಕು ಮುಕ್ತಾ ಗ್ರಾಮಗಳ ನಿರ್ಮಾಣಕ್ಕೆ ಶ್ರಮಿಸಬೇಕು. ತಾಲ್ಲೂಕಿನಲ್ಲಿ ಈಗಾಗಲೇ 7 ಮಂದಿಗೆ ಮ್ಯೂಕರ್ ಮೈಕೊಸಿಸ್ ತಗುಲಿದ್ದು , ಇಬ್ಬರು ಮೃತಪಟ್ಟಿದ್ದಾರೆ. ಸೋಂಕಿನ ಲಕ್ಷಣಗಳನ್ನು ಪತ್ತೆಹಚ್ಚಿ, ಗಮನಕ್ಕೆ ತಂದು ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಅಧಿಕಾರಿಗಳು ನೆರವು ನೀಡಬೇಕು ಎಂದರು.</p>.<p>ಡಿವೈಎಸ್ಪಿ ರಮೇಶ್ ಮಾತನಾಡಿ, ರೈತರ ಖಾತೆಗಳಿಗೆ ರಾಗಿ ಮತ್ತು ಕಿಸಾನ್ ಸಮ್ಮಾನ್ ಹಣ ಬಿಡುಗಡೆಯಾಗಿದೆ. ಡಿಸಿಸಿ ಬ್ಯಾಂಕ್, ಪಡಿತರ ವಿತರಣಾ ಕೇಂದ್ರಗಳ ಮುಂದೆ ಜನ ಜಮಾವಣೆಯಾಗುತ್ತಿದ್ದಾರೆ. ಈ ಸ್ಥಳಗಳಲ್ಲಿ ಸೋಂಕು ಹರಡುವ ಸಾಧ್ಯತೆ ಇದ್ದು, ಬ್ಯಾಂಕ್ ಸಮಯ ಬದಲಾವಣೆ ಮಾಡುವಂತೆ ಮತ್ತು ಪಡಿತರ ವಿತರಣಾ ಕೇಂದ್ರಗಳ ಟೋಕನ್ ಪದ್ಧತಿ ಜಾರಿಗೆ ತರುವಂತೆ ಸಲಹೆ ನೀಡಿದರು.</p>.<p>ಗ್ರಾಮೀಣ ಪ್ರದೇಶದ ಜನ ರೋಗದ ಲಕ್ಷಣ ಕಂಡು ಬಂದ ತಕ್ಷಣ ಮೆಡಿಕಲ್ಗಳಿಗೆ ತೆರಳಿ ಔಷಧಿ ಪಡೆಯುತ್ತಿದ್ದಾರೆ. ವೈದ್ಯರ ಚೀಟಿ ಇಲ್ಲದೆ ಔಷಧಿ ನೀಡದಂತೆ ಮಾಲೀಕರಿಗೆ ಸೂಚನೆ ನೀಡುವಂತೆ ತಿಳಿಸಿದರು.</p>.<p>ಜ್ವರದ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿ. ವರದಿ ನಂತರ ಚಿಕಿತ್ಸೆಗೆ ಗಮನ ಹರಿಸುವಂತೆ ಸ್ಥಳೀಯ ವೈದ್ಯರು ಸಭೆ ನಡೆಸಿ ಸೂಚನೆ ನೀಡುವಂತೆ ತಹಶೀಲ್ದಾರ್ ಮಹಾಬಲೇಶ್ವರ್ ಮತ್ತು ಪುರಸಭೆ ಮುಖ್ಯಾಧಿಕಾರಿ ರವಿಕುಮಾರ್ ಅವರಿಗೆ ಶಾಸಕರು ಸಲಹೆ ನೀಡಿದರು ..</p>.<p>ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ರಮೇಶ್, ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್, ಸಿಪಿಐ ಗುರುಪ್ರಸಾಧ್, ಡಿ.ಎಲ್.ರಾಜು, ಪುರಸಭೆ ಅಧ್ಯಕ್ಷ ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ‘ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ಹೆಚ್ಚುತ್ತಿದ್ದು, ಸೋಂಕು ಹರಡುವುದನ್ನು ತಡೆಯಲು ಗ್ರಾಮಪಂಚಾಯಿತಿ ಪಿಡಿಒ ಸಹಕರಿಸುತ್ತಿಲ್ಲ, ಬಿಲ್ ಮಾಡುವ ದಂಧೆಯಲ್ಲಿ ನಿರತರಾಗಿದ್ದಾರೆ’ ಎಂದು ಶಾಸಕ ಡಾ.ರಂಗನಾಥ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೋವಿಡ್ ನಿಯಂತ್ರಣ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನ 36 ಗ್ರಾಮಪಂಚಾಯಿತಿಗಳಲ್ಲಿ 4 ಸಾವಿರ ಸೋಂಕಿತರು ಇದ್ದಾರೆ. 200 ಮಂದಿ ಮೃತರಾಗಿದ್ದಾರೆ. ಯಾವುದೇ ಪಿಡಿಒ ಆಗಲಿ, ಸಿಬ್ಬಂದಿಯಾಗಲಿ, ಸೋಂಕಿತರನ್ನು ಭೇಟಿ ಮಾಡಿ ಸ್ಥೈರ್ಯ ತುಂಬಿಲ್ಲ ಎಂದರು.</p>.<p>ಪರಿಸ್ಥಿತಿ ಗಂಭೀರವಾಗುತ್ತಿದ್ದೆ. ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಲು ಹಾಗೂ ವಲಸಿಗರನ್ನು ತಡೆಯಲು ಸೂಚಿಸಿದರು.</p>.<p>ತಾಲ್ಲೂಕಿನಲ್ಲಿ 850 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಅವರಿಗೂ ಪಡಿತರ ವಿತರಣೆಗೆ ಕ್ರಮಕೈಗೊಳ್ಳಲು ಸೂಚಿಸಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ನಿಯೋಜನೆಗೊಂಡಿರುವ ನೋಡಲ್ ಅಧಿಕಾರಿಗಳು ಕಚೇರಿ ಬಿಟ್ಟು ಗ್ರಾಮೀಣ ಪ್ರದೇಶಕ್ಕೆ ತೆರಳಿ ವಿಶೇಷ ಕಾರ್ಯತಂತ್ರ ರೂಪಿಸಿ ಸೋಂಕು ಮುಕ್ತಾ ಗ್ರಾಮಗಳ ನಿರ್ಮಾಣಕ್ಕೆ ಶ್ರಮಿಸಬೇಕು. ತಾಲ್ಲೂಕಿನಲ್ಲಿ ಈಗಾಗಲೇ 7 ಮಂದಿಗೆ ಮ್ಯೂಕರ್ ಮೈಕೊಸಿಸ್ ತಗುಲಿದ್ದು , ಇಬ್ಬರು ಮೃತಪಟ್ಟಿದ್ದಾರೆ. ಸೋಂಕಿನ ಲಕ್ಷಣಗಳನ್ನು ಪತ್ತೆಹಚ್ಚಿ, ಗಮನಕ್ಕೆ ತಂದು ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಅಧಿಕಾರಿಗಳು ನೆರವು ನೀಡಬೇಕು ಎಂದರು.</p>.<p>ಡಿವೈಎಸ್ಪಿ ರಮೇಶ್ ಮಾತನಾಡಿ, ರೈತರ ಖಾತೆಗಳಿಗೆ ರಾಗಿ ಮತ್ತು ಕಿಸಾನ್ ಸಮ್ಮಾನ್ ಹಣ ಬಿಡುಗಡೆಯಾಗಿದೆ. ಡಿಸಿಸಿ ಬ್ಯಾಂಕ್, ಪಡಿತರ ವಿತರಣಾ ಕೇಂದ್ರಗಳ ಮುಂದೆ ಜನ ಜಮಾವಣೆಯಾಗುತ್ತಿದ್ದಾರೆ. ಈ ಸ್ಥಳಗಳಲ್ಲಿ ಸೋಂಕು ಹರಡುವ ಸಾಧ್ಯತೆ ಇದ್ದು, ಬ್ಯಾಂಕ್ ಸಮಯ ಬದಲಾವಣೆ ಮಾಡುವಂತೆ ಮತ್ತು ಪಡಿತರ ವಿತರಣಾ ಕೇಂದ್ರಗಳ ಟೋಕನ್ ಪದ್ಧತಿ ಜಾರಿಗೆ ತರುವಂತೆ ಸಲಹೆ ನೀಡಿದರು.</p>.<p>ಗ್ರಾಮೀಣ ಪ್ರದೇಶದ ಜನ ರೋಗದ ಲಕ್ಷಣ ಕಂಡು ಬಂದ ತಕ್ಷಣ ಮೆಡಿಕಲ್ಗಳಿಗೆ ತೆರಳಿ ಔಷಧಿ ಪಡೆಯುತ್ತಿದ್ದಾರೆ. ವೈದ್ಯರ ಚೀಟಿ ಇಲ್ಲದೆ ಔಷಧಿ ನೀಡದಂತೆ ಮಾಲೀಕರಿಗೆ ಸೂಚನೆ ನೀಡುವಂತೆ ತಿಳಿಸಿದರು.</p>.<p>ಜ್ವರದ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿ. ವರದಿ ನಂತರ ಚಿಕಿತ್ಸೆಗೆ ಗಮನ ಹರಿಸುವಂತೆ ಸ್ಥಳೀಯ ವೈದ್ಯರು ಸಭೆ ನಡೆಸಿ ಸೂಚನೆ ನೀಡುವಂತೆ ತಹಶೀಲ್ದಾರ್ ಮಹಾಬಲೇಶ್ವರ್ ಮತ್ತು ಪುರಸಭೆ ಮುಖ್ಯಾಧಿಕಾರಿ ರವಿಕುಮಾರ್ ಅವರಿಗೆ ಶಾಸಕರು ಸಲಹೆ ನೀಡಿದರು ..</p>.<p>ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ರಮೇಶ್, ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್, ಸಿಪಿಐ ಗುರುಪ್ರಸಾಧ್, ಡಿ.ಎಲ್.ರಾಜು, ಪುರಸಭೆ ಅಧ್ಯಕ್ಷ ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>