ಕೆಲಸಕ್ಕೆ ಹಾಜರಾಗುವ ಮುನ್ನ ಅವರ ಆರೋಗ್ಯ ತಪಾಸಣೆ ನಡೆಸಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಕುಟುಂಬ ಸದಸ್ಯರು ಸೇರಿದಂತೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ಇವರಿಗೆ ಸೋಂಕು ಹೇಗೆ ತಗುಲಿತು ಎನ್ನುವುದು ಪತ್ತೆಯಾಗಿಲ್ಲ. ಇದು ಜಿಲ್ಲಾ ಆರೋಗ್ಯ ಇಲಾಖೆಗೆ ಸವಾಲಾಗಿದೆ. ಮಾವಿನಕುಂಟೆಯನ್ನು ಕಂಟೈನ್ನ್ಮೆಂಟ್ ವಲಯ ಎಂದು ಜಿಲ್ಲಾಡಳಿತ ಘೋಷಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.