<p><strong>ತುಮಕೂರು</strong>: ಕಾಂತರಾಜ ಸಮಿತಿ ಸಲ್ಲಿಸಿರುವ ಜಾತಿ ಜನ ಗಣತಿ (ಆರ್ಥಿಕ, ಸಾಮಾಜಿಕ ಗಣತಿ) ವರದಿ ಬಹಿರಂಗ ಪಡಿಸುವಂತೆ ಸಿಪಿಎಂ ಆಗ್ರಹಿಸಿದೆ.</p>.<p>ಆಯೋಗ ವರದಿ ಸಲ್ಲಿಸಿ ವರ್ಷಗಳೇ ಕಳೆದಿದ್ದರೂ ಸರ್ಕಾರ ಅದನ್ನು ಅಂಗೀಕರಿಸಿಲ್ಲ. ಸಾರ್ವಜನಿಕ ಚರ್ಚೆಗೂ ಬಿಡುಗಡೆ ಮಾಡಿಲ್ಲ. ಇದು ಜನ ವಿರೋಧಿ ನಿಲುವಾಗಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ನಗರ ಕಾರ್ಯದರ್ಶಿ ಎ.ಲೋಕೇಶ್ ಆರೋಪಿಸಿದ್ದಾರೆ.</p>.<p>ಸವೀಕ್ಷೆ ವರದಿ ಅಧಿಕೃತವಾಗಿ ಬಿಡುಗಡೆ ಆಗಿದ್ದರೂ ಕೆಲವರು ವರದಿ ದೋಷಪೂರಿತವಾಗಿದೆ, ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಲ್ಲ ಎಂದು ವಿರೋಧಿಸುವುದು ಸರಿಯಲ್ಲ. ವರದಿ ಬಿಡುಗಡೆ ಪರ– ವಿರೋಧ ಬೇಡಿಕೆಗಳು ಒಂದೊಂದು ಜಾತಿಯ ಹಿತಾಸಕ್ತಿಯ ಹಿನ್ನೆಲೆಯಲ್ಲಿ ರೂಪುಗೊಳ್ಳುತ್ತಿರುವುದು ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.</p>.<p>ಸರ್ಕಾರವೇ ಆಯೋಗ ರಚಿಸಿ ಸುಮಾರು ₹164 ಕೋಟಿ ಖರ್ಚು ಮಾಡಿ ವರದಿ ಸಿದ್ಧಪಡಿಸಿದೆ. ಅದನ್ನು ಸಾರ್ವಜನಿಕ ಚರ್ಚೆಗೆ ಬಿಟ್ಟು, ಅಂತಿಮವಾಗಿ ಒಂದು ನಿರ್ಧಾರ ಕೈಗೊಳ್ಳಬೇಕು. ವರದಿಯನ್ನು ಮುಂದಿಟ್ಟುಕೊಂಡು ಸಮಾಜದಲ್ಲಿ ಒಡಕು ಉಂಟು ಮಾಡುವ ಪ್ರಯತ್ನಗಳಿಗೆ ಸರ್ಕಾರವೇ ಕುಮ್ಮಕ್ಕು ಕೊಡಬಾರದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕಾಂತರಾಜ ಸಮಿತಿ ಸಲ್ಲಿಸಿರುವ ಜಾತಿ ಜನ ಗಣತಿ (ಆರ್ಥಿಕ, ಸಾಮಾಜಿಕ ಗಣತಿ) ವರದಿ ಬಹಿರಂಗ ಪಡಿಸುವಂತೆ ಸಿಪಿಎಂ ಆಗ್ರಹಿಸಿದೆ.</p>.<p>ಆಯೋಗ ವರದಿ ಸಲ್ಲಿಸಿ ವರ್ಷಗಳೇ ಕಳೆದಿದ್ದರೂ ಸರ್ಕಾರ ಅದನ್ನು ಅಂಗೀಕರಿಸಿಲ್ಲ. ಸಾರ್ವಜನಿಕ ಚರ್ಚೆಗೂ ಬಿಡುಗಡೆ ಮಾಡಿಲ್ಲ. ಇದು ಜನ ವಿರೋಧಿ ನಿಲುವಾಗಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ನಗರ ಕಾರ್ಯದರ್ಶಿ ಎ.ಲೋಕೇಶ್ ಆರೋಪಿಸಿದ್ದಾರೆ.</p>.<p>ಸವೀಕ್ಷೆ ವರದಿ ಅಧಿಕೃತವಾಗಿ ಬಿಡುಗಡೆ ಆಗಿದ್ದರೂ ಕೆಲವರು ವರದಿ ದೋಷಪೂರಿತವಾಗಿದೆ, ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಲ್ಲ ಎಂದು ವಿರೋಧಿಸುವುದು ಸರಿಯಲ್ಲ. ವರದಿ ಬಿಡುಗಡೆ ಪರ– ವಿರೋಧ ಬೇಡಿಕೆಗಳು ಒಂದೊಂದು ಜಾತಿಯ ಹಿತಾಸಕ್ತಿಯ ಹಿನ್ನೆಲೆಯಲ್ಲಿ ರೂಪುಗೊಳ್ಳುತ್ತಿರುವುದು ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.</p>.<p>ಸರ್ಕಾರವೇ ಆಯೋಗ ರಚಿಸಿ ಸುಮಾರು ₹164 ಕೋಟಿ ಖರ್ಚು ಮಾಡಿ ವರದಿ ಸಿದ್ಧಪಡಿಸಿದೆ. ಅದನ್ನು ಸಾರ್ವಜನಿಕ ಚರ್ಚೆಗೆ ಬಿಟ್ಟು, ಅಂತಿಮವಾಗಿ ಒಂದು ನಿರ್ಧಾರ ಕೈಗೊಳ್ಳಬೇಕು. ವರದಿಯನ್ನು ಮುಂದಿಟ್ಟುಕೊಂಡು ಸಮಾಜದಲ್ಲಿ ಒಡಕು ಉಂಟು ಮಾಡುವ ಪ್ರಯತ್ನಗಳಿಗೆ ಸರ್ಕಾರವೇ ಕುಮ್ಮಕ್ಕು ಕೊಡಬಾರದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>