<p><strong>ತುಮಕೂರು:</strong> ‘ನೇಕಾರರು ಸಹಕಾರ ಸಂಘಗಳನ್ನು (ಸೊಸೈಟಿ) ರಚಿಸಿಕೊಳ್ಳಬೇಕು. ತಾವು ಉತ್ಪಾಧಿಸುವ ಉತ್ಪನ್ನಗಳನ್ನು ಆ ಮೂಲಕ ವ್ಯಾಪಾರ, ವಹಿವಾಟು ನಡೆಸಬೇಕು’ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.</p>.<p>ಬುಧವಾರ ತುಮಕೂರು ಜಿಲ್ಲಾ ನೇಕಾರರ ಒಕ್ಕೂಟದವತಿಯಿಂದ ಆಯೋಜಿಸಿದ್ದ ನೇಕಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಆನಾದಿಕಾಲದಿಂದಲೂ ಕುಲಕಸುಬನ್ನೇ ನಂಬಿ ನೇಕಾರರು ಬದುಕು ನಡೆಸಿಕೊಂಡು ಬಂದಿದ್ದಾರೆ. ಇವರು ಉತ್ಪಾದಿಸುವ ಉತನ್ನಗಳಿಂದ ಮಾರಾಟಗಾರರಿಗೆ ಹೆಚ್ಚು ಲಾಭ ಲಭಿಸುತ್ತಿದೆ. ಉತ್ಪಾದಕರಿಗೂ ಹೆಚ್ಚಿನ ಲಾಭ ಬರಬೇಕೆಂದರೆ ಸಹಕಾರ ಸಂಘಗಳನ್ನು ರಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಅತಿ ಹಿಂದುಳಿದಿರುವ ನೇಕಾರ ಸಮುದಾಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುತಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರವಹಿಸಿಕೊಂಡ ಕೆಲವೇ ಹೊತ್ತಿನಲ್ಲಿ ನೇಕಾರರ ₹ 100 ಕೋಟಿ ಸಾಲ ಮನ್ನಾ ಮಾಡಿದ್ದಾರೆ’ ಎಂದರು.</p>.<p>’ಕ್ಯಾತ್ಸಂದ್ರದಲ್ಲಿ ವಸತಿ ನಿಲಯ ಮತ್ತು ಸಮುದಾಯ ಭವನಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ₹ 5 ಲಕ್ಷ ನೀಡಲಾಗಿದೆ. ಇನ್ನೂ ₹ 5 ಲಕ್ಷ ನೀಡಲಾಗುವುದು’ ಎಂದು ಹೇಳಿದರು.</p>.<p>ಅಧ್ಯಕ್ಷತೆವಹಿಸಿದ್ದ ಜಿಲ್ಲಾ ನೇಕಾರರ ಸಂಘದ ಅಧ್ಯಕ್ಷ ಗಂಗಪ್ಪ ಮಾತನಾಡಿ,‘ ಇದುವರೆಗೂ ಆಡಳಿತ ನಡೆಸಿದ ಸರ್ಕಾರಗಳು ನೇಕಾರ ಸಮುದಾಯವನ್ನು ಗುರುತಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಸಮುದಾಯ ಗುರುತಿಸಿ ಗೌರವಿಸಿದ್ದಾರೆ’ ಎಂದರು.</p>.<p>ಕನ್ನಡ ಸೇನೆಯ ಜಿಲ್ಲಾ ಘಟಕ ಅಧ್ಯಕ್ಷ ಧನಿಯಾಕುಮಾರ್ ಮಾತನಾಡಿ,‘ ಹೊಟ್ಟೆಗೆ ಅನ್ನ ನೀಡುವ ರೈತರು ಎಷ್ಟು ಮುಖ್ಯವೊ ಮಾನ ಮುಚ್ಚಲು ಬಟ್ಟೆ ನೇಯುವ ನೇಕಾರರು ಅಷ್ಟೇ ಮುಖ್ಯ’ ಎಂದರು.</p>.<p>’ರೈತರು ಸಂಕಷ್ಟಕ್ಕೆ ಒಳಗಾದರೆ ಅವರ ನೇರವಿಗೆ ಅನೇಕ ಕಾನೂನುಗಳಿವೆ. ಆದರೆ, ನೇಕಾರರ ಹಿತ ಕಾಯಲು ಯಾವುದೇ ಕಾನೂನುಗಳಿಲ್ಲ. ಆದರೂ ರಾಷ್ಟ್ರಮಟ್ಟ ಮತ್ತು ರಾಜ್ಯಮಟ್ಟದಲ್ಲಿ ನಮ್ಮನ್ನು ಗುರುತಿಸಿ, ನಮ್ಮ ಕಷ್ಟ ಸುಖಃಗಳಿಗೆ ಸ್ಪಂದಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ’ ಎಂದು ಹೇಳಿದರು.</p>.<p>ಪಾಲಿಕೆ ಸದಸ್ಯರಾದ ಗಿರಿಜಾ ಧನಿಯಾಕುಮಾರ್, 26ನೇ ವಾರ್ಡಿನ ಸದಸ್ಯ ಮಲ್ಲಿಕಾರ್ಜುನ್ ಮಾತನಾಡಿದರು.</p>.<p>ನೆರೆಯ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ನೇಕಾರರಿಗೆ ಉಚಿತ ವಿದ್ಯುತ್, ಮನೆಗಳ ನಿರ್ಮಾಣ, ಆರೋಗ್ಯ ವಿಮೆಯಂತಹ ಯೋಜನೆಗಳನ್ನು ರೂಪಿಸಲಾಗಿದೆ. ರಾಜ್ಯ ಸರ್ಕಾರವೂ ಅದೇ ರೀತಿಯಲ್ಲಿ ನೇಕಾರರ ನೆರವು ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದರು.</p>.<p>ರವೀಂದ್ರಕುಮಾರ್, ಕುರುಹಿನಶೆಟ್ಟಿ ಸಮುದಾಯದ ಶಿವಾನಂದಪ್ಪ, ನೇಕಾರರ ಒಕ್ಕೂಟದ ಗೌರವ ಅಧ್ಯಕ್ಷ ರಾಮಕೃಷ್ಣಪ್ಪ, ಪದ್ಮಶಾಲಿ ಸಮಾಜದ ಶ್ರೀಧರ್, ಅನಿಲ್, ದೇವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ನೇಕಾರರು ಸಹಕಾರ ಸಂಘಗಳನ್ನು (ಸೊಸೈಟಿ) ರಚಿಸಿಕೊಳ್ಳಬೇಕು. ತಾವು ಉತ್ಪಾಧಿಸುವ ಉತ್ಪನ್ನಗಳನ್ನು ಆ ಮೂಲಕ ವ್ಯಾಪಾರ, ವಹಿವಾಟು ನಡೆಸಬೇಕು’ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.</p>.<p>ಬುಧವಾರ ತುಮಕೂರು ಜಿಲ್ಲಾ ನೇಕಾರರ ಒಕ್ಕೂಟದವತಿಯಿಂದ ಆಯೋಜಿಸಿದ್ದ ನೇಕಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಆನಾದಿಕಾಲದಿಂದಲೂ ಕುಲಕಸುಬನ್ನೇ ನಂಬಿ ನೇಕಾರರು ಬದುಕು ನಡೆಸಿಕೊಂಡು ಬಂದಿದ್ದಾರೆ. ಇವರು ಉತ್ಪಾದಿಸುವ ಉತನ್ನಗಳಿಂದ ಮಾರಾಟಗಾರರಿಗೆ ಹೆಚ್ಚು ಲಾಭ ಲಭಿಸುತ್ತಿದೆ. ಉತ್ಪಾದಕರಿಗೂ ಹೆಚ್ಚಿನ ಲಾಭ ಬರಬೇಕೆಂದರೆ ಸಹಕಾರ ಸಂಘಗಳನ್ನು ರಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಅತಿ ಹಿಂದುಳಿದಿರುವ ನೇಕಾರ ಸಮುದಾಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುತಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರವಹಿಸಿಕೊಂಡ ಕೆಲವೇ ಹೊತ್ತಿನಲ್ಲಿ ನೇಕಾರರ ₹ 100 ಕೋಟಿ ಸಾಲ ಮನ್ನಾ ಮಾಡಿದ್ದಾರೆ’ ಎಂದರು.</p>.<p>’ಕ್ಯಾತ್ಸಂದ್ರದಲ್ಲಿ ವಸತಿ ನಿಲಯ ಮತ್ತು ಸಮುದಾಯ ಭವನಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ₹ 5 ಲಕ್ಷ ನೀಡಲಾಗಿದೆ. ಇನ್ನೂ ₹ 5 ಲಕ್ಷ ನೀಡಲಾಗುವುದು’ ಎಂದು ಹೇಳಿದರು.</p>.<p>ಅಧ್ಯಕ್ಷತೆವಹಿಸಿದ್ದ ಜಿಲ್ಲಾ ನೇಕಾರರ ಸಂಘದ ಅಧ್ಯಕ್ಷ ಗಂಗಪ್ಪ ಮಾತನಾಡಿ,‘ ಇದುವರೆಗೂ ಆಡಳಿತ ನಡೆಸಿದ ಸರ್ಕಾರಗಳು ನೇಕಾರ ಸಮುದಾಯವನ್ನು ಗುರುತಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಸಮುದಾಯ ಗುರುತಿಸಿ ಗೌರವಿಸಿದ್ದಾರೆ’ ಎಂದರು.</p>.<p>ಕನ್ನಡ ಸೇನೆಯ ಜಿಲ್ಲಾ ಘಟಕ ಅಧ್ಯಕ್ಷ ಧನಿಯಾಕುಮಾರ್ ಮಾತನಾಡಿ,‘ ಹೊಟ್ಟೆಗೆ ಅನ್ನ ನೀಡುವ ರೈತರು ಎಷ್ಟು ಮುಖ್ಯವೊ ಮಾನ ಮುಚ್ಚಲು ಬಟ್ಟೆ ನೇಯುವ ನೇಕಾರರು ಅಷ್ಟೇ ಮುಖ್ಯ’ ಎಂದರು.</p>.<p>’ರೈತರು ಸಂಕಷ್ಟಕ್ಕೆ ಒಳಗಾದರೆ ಅವರ ನೇರವಿಗೆ ಅನೇಕ ಕಾನೂನುಗಳಿವೆ. ಆದರೆ, ನೇಕಾರರ ಹಿತ ಕಾಯಲು ಯಾವುದೇ ಕಾನೂನುಗಳಿಲ್ಲ. ಆದರೂ ರಾಷ್ಟ್ರಮಟ್ಟ ಮತ್ತು ರಾಜ್ಯಮಟ್ಟದಲ್ಲಿ ನಮ್ಮನ್ನು ಗುರುತಿಸಿ, ನಮ್ಮ ಕಷ್ಟ ಸುಖಃಗಳಿಗೆ ಸ್ಪಂದಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ’ ಎಂದು ಹೇಳಿದರು.</p>.<p>ಪಾಲಿಕೆ ಸದಸ್ಯರಾದ ಗಿರಿಜಾ ಧನಿಯಾಕುಮಾರ್, 26ನೇ ವಾರ್ಡಿನ ಸದಸ್ಯ ಮಲ್ಲಿಕಾರ್ಜುನ್ ಮಾತನಾಡಿದರು.</p>.<p>ನೆರೆಯ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ನೇಕಾರರಿಗೆ ಉಚಿತ ವಿದ್ಯುತ್, ಮನೆಗಳ ನಿರ್ಮಾಣ, ಆರೋಗ್ಯ ವಿಮೆಯಂತಹ ಯೋಜನೆಗಳನ್ನು ರೂಪಿಸಲಾಗಿದೆ. ರಾಜ್ಯ ಸರ್ಕಾರವೂ ಅದೇ ರೀತಿಯಲ್ಲಿ ನೇಕಾರರ ನೆರವು ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದರು.</p>.<p>ರವೀಂದ್ರಕುಮಾರ್, ಕುರುಹಿನಶೆಟ್ಟಿ ಸಮುದಾಯದ ಶಿವಾನಂದಪ್ಪ, ನೇಕಾರರ ಒಕ್ಕೂಟದ ಗೌರವ ಅಧ್ಯಕ್ಷ ರಾಮಕೃಷ್ಣಪ್ಪ, ಪದ್ಮಶಾಲಿ ಸಮಾಜದ ಶ್ರೀಧರ್, ಅನಿಲ್, ದೇವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>