ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಮಧುಗಿರಿ ಜಿಲ್ಲೆ ರೂಪಿಸಲು ವಿಧಾನಸಭೆಯಲ್ಲಿ ಒತ್ತಾಯ

Last Updated 20 ಫೆಬ್ರುವರಿ 2020, 8:48 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ಮಧುಗಿರಿ ಜಿಲ್ಲೆ ರೂಪಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ವೀರಭದ್ರಯ್ಯ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ತುಮಕೂರು ಜಿಲ್ಲೆ ದೊಡ್ಡದಾಗಿದೆ. ಅದನ್ನು ವಿಭಜಿಸಿಮಧುಗಿರಿ ಜಿಲ್ಲೆ ರೂಪಿಸಿದರೆ ಆಡಳಿತ ಮತ್ತು ಅಭಿವೃದ್ಧಿ ಚಟುವಟಿಕೆಗಳ ನಿರ್ವಹಣೆಗೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ಈ ಹಿಂದೆ ರಾಜ್ಯದ ಹಲವು ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ಸಣ್ಣ ಜಿಲ್ಲೆಗಳನ್ನು ರೂಪಿಸಿದ್ದನ್ನು ಉಲ್ಲೇಖಿಸಿದ ಅವರು, ಮಧುಗಿರಿ ಭಾಗದ ಜನರು ಹಲವು ವರ್ಷಗಳಿಂದ ಈ ಬೇಡಿಕೆ ಮುಂದಿಟ್ಟಿದ್ದಾರೆ. ಸರ್ಕಾರ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT