ಜಿಲ್ಲೆಯಲ್ಲಿ ಮರಣ ಪ್ರಮಾಣ ಶೇ 2.1ರಷ್ಟಿದೆ ಎಂಬ ಅಧಿಕಾರಿಗಳ ಮಾಹಿತಿಗೆ ಬೇಸರಗೊಂಡ ಸಚಿವರು, ಸಾವಿನ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಏನೆಲ್ಲಾ ಕ್ರಮ ಕೈಗೊಂಡಿದ್ದೀರಿ? ಎಲ್ಲ ಸಾವನ್ನೂ ಕೊರೊನಾ ಎಂದೇ ವರದಿ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ವಾರಕ್ಕೆ ಒಮ್ಮೆ ಸಾವಿನ ಲೆಕ್ಕಾಚಾರ (ಡೆತ್ ಆಡಿಟ್) ಮಾಡುವ ಬದಲು, ಪ್ರತಿ ದಿನ ಸಾವಿನ ಮಾಹಿತಿಯ ಲೆಕ್ಕಾಚಾರ ಆಗಲೇಬೇಕು. ನಂತರ ಆ ವರದಿ ಸಲ್ಲಿಸಿ ಎಂದು ನಿರ್ದೇಶನ ನೀಡಿದರು.