ತುಮಕೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳು ವರಿನ್ ಅಂತರರಾಷ್ಟ್ರೀಯ ವಸತಿ ಶಾಲೆ ಸಹಯೋಗದಲ್ಲಿ ಜ.18ರಂದು ಹಮ್ಮಿಕೊಂಡಿರುವ ಚಿತ್ರಕಲಾ ಸ್ಪರ್ಧೆಯ ಭಿತ್ತಿಪತ್ರಗಳನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ತುಮಕೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್ ಕುಮಾರ್ ಹಾಗೂ ವರಿನ್ ಅಂತರರಾಷ್ಟ್ರೀಯ ಶಾಲೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಗುರುವಾರ ಬಿಡುಗಡೆ ಮಾಡಿದರು.