ಶ್ರೀರಂಗಪಟ್ಟಣ (ಮಂಡ್ಯ): ನಾಮಪತ್ರ ಸಲ್ಲಿಸಿದ ಬಳಿಕ ಹೊರಗೆ ಬಂದ ಕಾಂಗ್ರೆಸ್ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡ ಅವರನ್ನು ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದರು. ಅಂಬೇಡ್ಕರ್ ವೃತ್ತಕ್ಕೆ ಬಂದ ಅವರಿಗೆ ಐವರು ಮಂಗಳಮುಖಿಯರು 9 ಕೊಡ ಹಾಲಿನ ಅಭಿಷೇಕ ಮಾಡಿದರು.
ರಮೇಶ ಬಂಡಿಸಿದ್ದೇಗೌಡ ತಮ್ಮ ಸಹಸ್ರಾರು ಬೆಂಬಲಿಗರ ಜತೆ ಬಂದು ಇಲ್ಲಿನ ಮಿನಿ ವಿಧಾನಸೌಧದಲ್ಲಿ ಕಾಂಗ್ರೆಸ್ ಫಾರಂ ಜತೆಗೆ, 4 ಸೆಟ್ ನಾಮಪತ್ರಗಳನ್ನು ಶುಕ್ರವಾರ ಸಲ್ಲಿಸಿದರು.
ಮೆರವಣಿಗೆ: ಇದಕ್ಕೂ ಮುನ್ನ ಬೆಂಗಳೂರು– ಮೈಸೂರು ಹೆದ್ದಾರಿ ವೃತ್ತದಿಂದ ರಾಜ ಬೀದಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜತೆ ಮೆರವಣಿಗೆಯಲ್ಲಿ ಬಂದರು. ಸಮಯ ಮೀರುತ್ತದೆ ಎಂಬ ಕಾರಣಕ್ಕೆ ಅರ್ಧ ದಾರಿಯಲ್ಲಿ ವಾಹನ ಇಳಿದು ಬೈಕ್ ಏರಿ ಮಿನಿ ವಿಧಾನಸೌಧಕ್ಕೆ ದೌಡಾಯಿಸಿದರು.