ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿ ಬಂಡಿಸಿದ್ದೇಗೌಡಗೆ ಕ್ಷೀರಾಭಿಷೇಕ

Last Updated 20 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ (ಮಂಡ್ಯ): ನಾಮಪತ್ರ ಸಲ್ಲಿಸಿದ ಬಳಿಕ ಹೊರಗೆ ಬಂದ ಕಾಂಗ್ರೆಸ್‌ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡ ಅವರನ್ನು ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದರು. ಅಂಬೇಡ್ಕರ್‌ ವೃತ್ತಕ್ಕೆ ಬಂದ ಅವರಿಗೆ ಐವರು ಮಂಗಳಮುಖಿಯರು 9 ಕೊಡ ಹಾಲಿನ ಅಭಿಷೇಕ ಮಾಡಿದರು.

ರಮೇಶ ಬಂಡಿಸಿದ್ದೇಗೌಡ ತಮ್ಮ ಸಹಸ್ರಾರು ಬೆಂಬಲಿಗರ ಜತೆ ಬಂದು ಇಲ್ಲಿನ ಮಿನಿ ವಿಧಾನಸೌಧದಲ್ಲಿ ಕಾಂಗ್ರೆಸ್‌ ಫಾರಂ ಜತೆಗೆ, 4 ಸೆಟ್‌ ನಾಮಪತ್ರಗಳನ್ನು ಶುಕ್ರವಾರ ಸಲ್ಲಿಸಿದರು.

ಮೆರವಣಿಗೆ: ಇದಕ್ಕೂ ಮುನ್ನ ಬೆಂಗಳೂರು– ಮೈಸೂರು ಹೆದ್ದಾರಿ ವೃತ್ತದಿಂದ ರಾಜ ಬೀದಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಜತೆ ಮೆರವಣಿಗೆಯಲ್ಲಿ ಬಂದರು. ಸಮಯ ಮೀರುತ್ತದೆ ಎಂಬ ಕಾರಣಕ್ಕೆ ಅರ್ಧ ದಾರಿಯಲ್ಲಿ ವಾಹನ ಇಳಿದು ಬೈಕ್‌ ಏರಿ ಮಿನಿ ವಿಧಾನಸೌಧಕ್ಕೆ ದೌಡಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT