ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಅವರ ಕುಟುಂಬದವರಿಗೆ ನೀಡಿದರು. ಪೊಲೀಸರು ಗೌರವ ರಕ್ಷೆ ನೀಡಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು. ನಂತರ ಪಾರ್ಥಿವ ಶರೀರವನ್ನು ಹಿಂದೂ ಸಂಪ್ರದಾಯದಂತೆ ಮಣ್ಣು ಮಾಡಲಾಯಿತು. ಸತ್ಯನಾರಾಯಣ ಪುತ್ರ ಸತ್ಯಪ್ರಕಾಶ್ ವಿಧಿವಿಧಾನಗಳನ್ನು ಪೂರೈಸಿದರು.