<p><strong>ತುಮಕೂರು: </strong>ತಾಲ್ಲೂಕಿನ ಗೇರಹಳ್ಳಿಯ ಶೆಡ್ನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಸೆ.16ರಂದು ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಸಿಪಿಐ ಜಿ.ಕೆ.ಮಧುಸೂದನ್ ನೇತೃತ್ವದ ತಂಡ ಶೆಡ್ ಮೇಲೆ ದಾಳಿ ನಡೆಸಿ 227 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿತ್ತು.</p>.<p>ಪ್ರಕರಣ ಸಂಬಂಧ ಬೆಂಗಳೂರಿನ ಕೆ.ಎನ್.ಶ್ರೀನಿವಾಸ ಹಾಗೂ ಅನ್ಬು ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀನಿವಾಸ್ ಚಿಕ್ಕಗುಂಡಗಲ್ ಗ್ರಾಮದ ಬಳಿ ಕುಮಾರಸ್ವಾಮಿ ಎಂಬುವವರಿಗೆ ಸೇರಿದ ಕೇಸರಿ ನಂದನ್ ರೈಸ್ಮಿಲ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 212 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ.</p>.<p>ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ಹಾಗೂ ಡಿವೈಎಸ್ಪಿ ಎಚ್.ಜೆ.ತಿಪ್ಪೇಸ್ವಾಮಿ ಮಾರ್ಗದರ್ಶನದಲ್ಲಿ ಸಿಪಿಐ ಮಧುಸೂದನ, ಪಿಎಸ್ಐ ಪಿ.ಎನ್.ಶೇಷಾದ್ರಿ, ಎ.ಎಸ್.ಐ ಬಾಲಕುಮಾರ, ಸಿ.ಎಸ್.ಪ್ರಸನ್ನಕುಮಾರ್, ಶಾಂತಕುಮಾರ್, ತಿಪ್ಪೇಸ್ವಾಮಿ ಮತ್ತು ರವಿಕುಮಾರ್ ಕಾರ್ಯಾಚರಣೆಯ ತಂಡದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ತಾಲ್ಲೂಕಿನ ಗೇರಹಳ್ಳಿಯ ಶೆಡ್ನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಸೆ.16ರಂದು ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಸಿಪಿಐ ಜಿ.ಕೆ.ಮಧುಸೂದನ್ ನೇತೃತ್ವದ ತಂಡ ಶೆಡ್ ಮೇಲೆ ದಾಳಿ ನಡೆಸಿ 227 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿತ್ತು.</p>.<p>ಪ್ರಕರಣ ಸಂಬಂಧ ಬೆಂಗಳೂರಿನ ಕೆ.ಎನ್.ಶ್ರೀನಿವಾಸ ಹಾಗೂ ಅನ್ಬು ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀನಿವಾಸ್ ಚಿಕ್ಕಗುಂಡಗಲ್ ಗ್ರಾಮದ ಬಳಿ ಕುಮಾರಸ್ವಾಮಿ ಎಂಬುವವರಿಗೆ ಸೇರಿದ ಕೇಸರಿ ನಂದನ್ ರೈಸ್ಮಿಲ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 212 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ.</p>.<p>ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ಹಾಗೂ ಡಿವೈಎಸ್ಪಿ ಎಚ್.ಜೆ.ತಿಪ್ಪೇಸ್ವಾಮಿ ಮಾರ್ಗದರ್ಶನದಲ್ಲಿ ಸಿಪಿಐ ಮಧುಸೂದನ, ಪಿಎಸ್ಐ ಪಿ.ಎನ್.ಶೇಷಾದ್ರಿ, ಎ.ಎಸ್.ಐ ಬಾಲಕುಮಾರ, ಸಿ.ಎಸ್.ಪ್ರಸನ್ನಕುಮಾರ್, ಶಾಂತಕುಮಾರ್, ತಿಪ್ಪೇಸ್ವಾಮಿ ಮತ್ತು ರವಿಕುಮಾರ್ ಕಾರ್ಯಾಚರಣೆಯ ತಂಡದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>