ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೇಮಾವತಿ ನಾಲೆಯಲ್ಲಿ ಮಹಿಳೆ ಶವ; ಮೂವರ ಬಂಧನ

Last Updated 16 ಅಕ್ಟೋಬರ್ 2019, 11:14 IST
ಅಕ್ಷರ ಗಾತ್ರ

ತುಮಕೂರು: ತುರುವೇಕೆರೆ ತಾಲ್ಲೂಕಿನ ಹುಲಿಕಲ್ ಬಳಿಯ ಹೇಮಾವತಿ ನಾಲೆಯಲ್ಲಿ ಅ.1ರಂದು ಮಹಿಳೆಯ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಲೋಕೇಶ್ ಕುಮಾರ್, ಬೆಂಗಳೂರಿನ ನಿಂಗಪ್ಪ, ನೊಣವಿನಕೆರೆಯ ಬಳಿಯ ಜೆ.ಮಲ್ಲೇನಹಳ್ಳಿ ನಾಗೇಶ್ ಬಂಧಿತರು. ಆರೋಪಿಗಳಿಂದ ದ್ವಿಚಕ್ರ ವಾಹನ, ಕಾರು, ಎರಡು ಬಂಗಾರದ ಬಳೆಗಳು ಮತ್ತು ಎರಡು ಉಂಗುರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಬೆಲೆ ₹ 2 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಡಿವೈಎಸ್‌ಪಿ ರಾಮಲಿಂಗೇಗೌಡ ನೇತೃತ್ವದಲ್ಲಿ ತನಿಖೆ ನಡೆದಿತ್ತು. ತುರುವೇಕೆರೆ ಸಿಪಿಐ ಲೋಕೇಶ್, ಎಎಸ್‌ಐ ಶಿವಲಿಂಗಪ್ಪ. ಸಿಬ್ಬಂದಿ ಎಂ.ಎಸ್.ರಮೇಶ್, ಕೇಶವಮೂರ್ತಿ, ಗಜೇಂದ್ರಕುಮಾರ್, ಮಧುಸೂದನ್, ಸಿ.ಆರ್.ಸತೀಶ್, ವೈ.ಎಸ್.ಸುಪ್ರಿತ್, ಮುತ್ತಣ್ಣ ಗುಡ್ನಾಳ್, ಕುಮಾರ್ ಕಾರ್ಯಾಚರಣೆಯ ತಂಡದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT