<p><strong>ತುಮಕೂರು:</strong> ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ನಿರುವಗಲ್ಲು ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.</p>.<p>ಗ್ರಾಮದ ಮಧು ಎಂಬಾತ ತನ್ನ ಸಹಚರರ ಜತೆ ನಿರುವಗಲ್ಲು ಸಮೀಪದ ಹಳ್ಳದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ. ಆ ಮರಳನ್ನು ಪಕ್ಕದ ಜಮೀನಿನಲ್ಲಿ ಶೇಖರಿಸಿ ಲಾರಿಗೆ ತುಂಬಿಸಿ ಸಾಗಣೆ ಮಾಡುತ್ತಿದ್ದ.</p>.<p>ಚಿಕ್ಕನಾಯಕನಹಳ್ಳಿ ಸಿಪಿಐ ಎಸ್.ಎಂ.ವೀಣಾ, ಸಿಬ್ಬಂದಿಯೊಂದಿಗೆ ದಾಳಿ ಮಾಡಿದರು. ಈ ಸಮಯದಲ್ಲಿ ಲಾರಿಗೆ ಮರಳನ್ನು ಅಕ್ರಮವಾಗಿ ತುಂಬಿಸುತ್ತಿದ್ದವರು ಓಡಿ ಹೋಗಿದ್ದಾರೆ.</p>.<p>ಸ್ಥಳದಲ್ಲಿದ್ದ ಮರಳು ತುಂಬಿದ ಒಂದು ಟಿಪ್ಪರ್ ಲಾರಿ, ಒಂದು ಜೆಸಿಬಿ, ಮೂರು ದ್ವಿಚಕ್ರ ವಾಹನ, ಶೇಖರಣೆ ಮಾಡಿದ್ದ ಎರಡು ಟ್ರಾಕ್ಟರ್ ಮರಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಪಿಎಸ್ಐಗಳಾದ ಶ್ರೀಕಾಂತ್, ನರಸಿಂಹಮೂರ್ತಿ, ಎಎಸ್ಐ ಪ್ರಕಾಶ್, ಸಿಬ್ಬಂದಿ ನಾಗಭೂಷಣ್, ದಕ್ಷಿಣಮೂರ್ತಿ, ಗಿರೀಶ, ಜಿಲಾನಿ, ಉಮಾಶಂಕರ, ಕಿರಣ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ನಿರುವಗಲ್ಲು ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.</p>.<p>ಗ್ರಾಮದ ಮಧು ಎಂಬಾತ ತನ್ನ ಸಹಚರರ ಜತೆ ನಿರುವಗಲ್ಲು ಸಮೀಪದ ಹಳ್ಳದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ. ಆ ಮರಳನ್ನು ಪಕ್ಕದ ಜಮೀನಿನಲ್ಲಿ ಶೇಖರಿಸಿ ಲಾರಿಗೆ ತುಂಬಿಸಿ ಸಾಗಣೆ ಮಾಡುತ್ತಿದ್ದ.</p>.<p>ಚಿಕ್ಕನಾಯಕನಹಳ್ಳಿ ಸಿಪಿಐ ಎಸ್.ಎಂ.ವೀಣಾ, ಸಿಬ್ಬಂದಿಯೊಂದಿಗೆ ದಾಳಿ ಮಾಡಿದರು. ಈ ಸಮಯದಲ್ಲಿ ಲಾರಿಗೆ ಮರಳನ್ನು ಅಕ್ರಮವಾಗಿ ತುಂಬಿಸುತ್ತಿದ್ದವರು ಓಡಿ ಹೋಗಿದ್ದಾರೆ.</p>.<p>ಸ್ಥಳದಲ್ಲಿದ್ದ ಮರಳು ತುಂಬಿದ ಒಂದು ಟಿಪ್ಪರ್ ಲಾರಿ, ಒಂದು ಜೆಸಿಬಿ, ಮೂರು ದ್ವಿಚಕ್ರ ವಾಹನ, ಶೇಖರಣೆ ಮಾಡಿದ್ದ ಎರಡು ಟ್ರಾಕ್ಟರ್ ಮರಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಪಿಎಸ್ಐಗಳಾದ ಶ್ರೀಕಾಂತ್, ನರಸಿಂಹಮೂರ್ತಿ, ಎಎಸ್ಐ ಪ್ರಕಾಶ್, ಸಿಬ್ಬಂದಿ ನಾಗಭೂಷಣ್, ದಕ್ಷಿಣಮೂರ್ತಿ, ಗಿರೀಶ, ಜಿಲಾನಿ, ಉಮಾಶಂಕರ, ಕಿರಣ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>