ಎರಡು ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಮಣ್ಣು ತೆರವಿಗೆ ಜೆಸಿಬಿ, ಹಿಟಾಚಿಗಳನ್ನು ಸ್ಥಳಕ್ಕೆ ತರಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ. ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಕಾರ್ಯಾಚರಣೆಗೆ ತೊಂದರೆ ಆಗುತ್ತಿದೆ. ಆದರೂ ಮಣ್ಣು ತೆರವು ಮಾಡಲು ನಿರಂತರ ಕೆಲಸ ಮಾಡಲಾಗುತ್ತಿದೆ. ಮಣ್ಣು ಕುಸಿತದಿಂದ ಹಾಸನ ಮಾರ್ಗದ ರೈಲು ಸಂಚಾರ ಸೋಮವಾರದಿಂದ ಸ್ಥಗಿತಗೊಂಡಿತ್ತು, ಈಗ ರಸ್ತೆ ಸಂಚಾರವೂ ಸ್ಥಗಿತವಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.