ಏತ ನೀರಾವರಿಗಾಗಿ ಚೆಕ್ಡ್ಯಾಂನಲ್ಲಿ ಹೇಮಾವತಿ ನಾಲೆಯಿಂದ ನೀರು ತುಂಬಿಸಲಾಗಿತ್ತು. ಐವರು ಸ್ನೇಹಿತರು ಈಜಲು ನೀರಿಗೆ ಇಳಿದಿದ್ದಾಗ ಮೂವರು ಮುಳುಗಿದ್ದಾರೆ. ಇನ್ನಿಬ್ಬರು ಪಾರಾಗಿದ್ದಾರೆ. ವೇದ ಮತ್ತು ಮಂಜು ಶವ ಪತ್ತೆಯಾಗಿವೆ. ನವೀನ್ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ. ಸುತ್ತಲಿನ ಹಳ್ಳಿಗಳ ನೂರಾರು ಜನರು ಜಮಾಯಿಸಿದ್ದರು. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.