ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟ ಹತ್ತುವಾಗ ಹೃದಯಾಘಾತ; ಶಾಲಾ ಸಿಬ್ಬಂದಿ ಸಾವು

Last Updated 6 ಡಿಸೆಂಬರ್ 2018, 13:15 IST
ಅಕ್ಷರ ಗಾತ್ರ

ಮಧುಗಿರಿ: ಇಲ್ಲಿನ ಏಕಶಿಲಾ ಬೆಟ್ಟವನ್ನು ಗುರುವಾರ ಬೆಳಿಗ್ಗೆ ಹತ್ತುವಾಗ ಹೃದಯಾಘಾತದಿಂದ ತಿಪ್ಪೇಸ್ವಾಮಿ(28) ಎಂಬುವವರು ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಸರ್ಕಾರಿ ಪ್ರೌಢ ಶಾಲೆಯ ದ್ವಿತೀಯ ದರ್ಜೆ ಸಹಾಯಕರಾಗಿದ್ದಾರೆ.

ಶಾಲೆಯ 46 ವಿದ್ಯಾರ್ಥಿಗಳು ಮತ್ತು ನಾಲ್ಕು ಶಿಕ್ಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಇವರು ಗುರುವಾರ ಬೆಳಿಗ್ಗೆ ಮಧುಗಿರಿ ಏಕಶಿಲಾ ಬೆಟ್ಟವನ್ನು ಹತ್ತುತ್ತಿದ್ದರು. ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಲ್ಲೂಕು ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಮಧುಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT