ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಭ್ಯ ವರ್ತನೆ; ಧರ್ಮದೇಟು ತಿಂದ ಯುವಕ

Last Updated 7 ನವೆಂಬರ್ 2019, 13:06 IST
ಅಕ್ಷರ ಗಾತ್ರ

ಕುಣಿಗಲ್: ಸರ್ಕಾರಿ ಪ್ರಥಮದರ್ಜೆ ಕಾಲೇಜು ಬಳಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಪೋಷಕರು ಧರ್ಮದೇಟು ನೀಡಿದ್ದಾರೆ.

ಗ್ರಾಮೀಣ ಪ್ರದೇಶದಿಂದ ಕಾಲೇಜಿಗೆ ತಿಪ್ಪನಾಯಕನ ಹಳ್ಳಿಯಿಂದ ಬರುತ್ತಿದ್ದ ರಕ್ಷಿತ್, ಯುವತಿಯೊಂದಿಗೆ ಕಳೆದ ಎರಡು ತಿಂಗಳಿಂದಲೂ ಅಸಭ್ಯವಾಗಿ ವರ್ತಿಸುತ್ತಿದ್ದ. ಇದರಿಂದ ಬೇಸತ್ತ ಯುವತಿ ಪೋಷಕರ ಗಮನಕ್ಕೆ ತಂದಿದ್ದರು.

ಪೋಷಕರು ಸಹ ಯುವಕನಿಗೆ ಬುದ್ದಿಮಾತು ಹೇಳಿದ್ದರೂ ಚಾಳಿಯನ್ನು ಮುಂದುವರಿಸಿದ್ದ. ಯುವತಿ ವಿದ್ಯಾಭ್ಯಾಸವನ್ನೇ ಮೊಟಕುಗೊಳಿಸುವ ನಿರ್ಧಾರಕ್ಕೆ ಬಂದಿದ್ದರಿಂದ ಬೇಸತ್ತ ಪೋಷಕರ ಕಡೆಯವರು ವಿಧಿ ಇಲ್ಲದೆ ಕಾಲೇಜು ಬಳಿ ಬಂದು ಯವಕನಿಗೆ ಧರ್ಮದೇಟು ನೀಡಿದ್ದಾರೆ. ಯುವಕ ಪರಾರಿಯಾಗಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT