ಕುಣಿಗಲ್:ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಘವನ ಹೊಸೂರು ಬಳಿ ಸೋಮವಾರ ಮಧ್ಯಾಹ್ನ ಕಾಡು ಹಂದಿಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಕಾಡು ಹಂದಿ ಮತ್ತು ಬೈಕ್ ಹಿಬಂದಿ ಕುಳಿತಿದ್ದ ಮಹಿಳೆ ಮೃತಪಟ್ಟಿದ್ದಾರೆ.
ಹೊಸಕೆರೆ ಗ್ರಾಮದ ಲಕ್ಷ್ಮಮ್ಮ (65) ಮೃತ ಮಹಿಳೆ. ಮಗ ರುದ್ರೇಶ ಜತೆ ಬೈಕ್ನಲ್ಲಿ ಬೆಂಗಳೂರಿಗೆ ಹೋಗುವಾಗ ಕಾಡು ಹಂದಿ ಅಡ್ಡಲಾಗಿ ಬಂದ ಕಾರಣ ಬೈಕ್ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಕಾಡುಹಂದಿ ಸ್ಥಳದಲ್ಲೇ ಮೃತಪಟ್ಟಿದೆ. ಲಕ್ಷ್ಮಮ್ಮ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದರು.
ರುದ್ರೇಶ್ ಅವರಿಗೆ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.