<p><strong>ತುಮಕೂರು: ಅ</strong>ತಿಯಾದ ಮೊಬೈಲ್ ಬಳಕೆಯಿಂದ ಅಪರಾಧ ಚಟುವಟಿಕೆಗಳಲ್ಲಿ ಸಿಲುಕುವುದು ಹೆಚ್ಚಾಗುತ್ತಿದೆ ಎಂದು ಮನೋವೈದ್ಯ ಲೋಕೇಶ್ಬಾಬು ಆತಂಕ ವ್ಯಕ್ತಪಡಿಸಿದರು.</p>.<p>ನಗರದ ಕಲಾ ಕಾಲೇಜಿನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರದಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಮಾನಸಿಕ ಅರಿವು ಕುರಿತ ಸಂವಾದದಲ್ಲಿ ಮಾತನಾಡಿದರು.</p>.<p>ಮೊಬೈಲ್ನ ಅತಿಯಾದ ಬಳಕೆ ಅನಾಹುತ, ಅಪರಾಧ ಚಟುವಟಿಕೆಗಳಿಗೆ ಆಹ್ವಾನಿಸುತ್ತದೆ. ವಿದ್ಯಾರ್ಥಿ ಸಮೂಹ ಎಚ್ಚರಿಕೆ ವಹಿಸಬೇಕು. ಮೊಬೈಲ್ ಬಳಕೆ ಮನುಷ್ಯರನ್ನು ದಡ್ಡರನ್ನಾಗಿಸುತ್ತಿದೆ. ಎಲ್ಲವನ್ನು ಮೊಬೈಲ್ನಲ್ಲಿ ನೋಡುತ್ತಾ ವ್ಯಸನಿಗಳಾಗುತ್ತಿದ್ದಾರೆ. ಇದೊಂದು ಮಾನಸಿಕ ಅನಾರೋಗ್ಯ ಎಂದರು.</p>.<p>ಕಲಾ ಕಾಲೇಜು ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ, ಪ್ರಾಧ್ಯಾಪಕ ಬಿ.ಕರಿಯಣ್ಣ, ಲೇಖಕಿ ಬಾ.ಹ.ರಮಾಕುಮಾರಿ, ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ.ಲಲಿತಾ, ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್, ಸಾಂತ್ವನ ಕೇಂದ್ರದ ಪಾರ್ವತಮ್ಮ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: ಅ</strong>ತಿಯಾದ ಮೊಬೈಲ್ ಬಳಕೆಯಿಂದ ಅಪರಾಧ ಚಟುವಟಿಕೆಗಳಲ್ಲಿ ಸಿಲುಕುವುದು ಹೆಚ್ಚಾಗುತ್ತಿದೆ ಎಂದು ಮನೋವೈದ್ಯ ಲೋಕೇಶ್ಬಾಬು ಆತಂಕ ವ್ಯಕ್ತಪಡಿಸಿದರು.</p>.<p>ನಗರದ ಕಲಾ ಕಾಲೇಜಿನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರದಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಮಾನಸಿಕ ಅರಿವು ಕುರಿತ ಸಂವಾದದಲ್ಲಿ ಮಾತನಾಡಿದರು.</p>.<p>ಮೊಬೈಲ್ನ ಅತಿಯಾದ ಬಳಕೆ ಅನಾಹುತ, ಅಪರಾಧ ಚಟುವಟಿಕೆಗಳಿಗೆ ಆಹ್ವಾನಿಸುತ್ತದೆ. ವಿದ್ಯಾರ್ಥಿ ಸಮೂಹ ಎಚ್ಚರಿಕೆ ವಹಿಸಬೇಕು. ಮೊಬೈಲ್ ಬಳಕೆ ಮನುಷ್ಯರನ್ನು ದಡ್ಡರನ್ನಾಗಿಸುತ್ತಿದೆ. ಎಲ್ಲವನ್ನು ಮೊಬೈಲ್ನಲ್ಲಿ ನೋಡುತ್ತಾ ವ್ಯಸನಿಗಳಾಗುತ್ತಿದ್ದಾರೆ. ಇದೊಂದು ಮಾನಸಿಕ ಅನಾರೋಗ್ಯ ಎಂದರು.</p>.<p>ಕಲಾ ಕಾಲೇಜು ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ, ಪ್ರಾಧ್ಯಾಪಕ ಬಿ.ಕರಿಯಣ್ಣ, ಲೇಖಕಿ ಬಾ.ಹ.ರಮಾಕುಮಾರಿ, ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ.ಲಲಿತಾ, ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್, ಸಾಂತ್ವನ ಕೇಂದ್ರದ ಪಾರ್ವತಮ್ಮ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>