<p><strong>ತುಮಕೂರು:</strong> ತೋಟಗಾರಿಕಾ ಇಲಾಖೆ, ಹಾಪ್ಕಾಮ್ಸ್ ಮತ್ತು ‘ಹನಿಮಿತ್ರ’ ಸಂಸ್ಥೆ ಸಹಯೋಗದಲ್ಲಿ ರೈತರಿಂದ ನೇರವಾಗಿ ಖರೀದಿಸಿದ ತರಕಾರಿ ಮತ್ತು ಹಣ್ಣುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ನಗರದ ಜಿಲ್ಲಾ ತೋಟಗಾರಿಕಾ ಕಚೇರಿ ಆವರಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.</p>.<p>ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಘು ಮಾತನಾಡಿ, ‘ಜನಸಾಮಾನ್ಯರು ತರಕಾರಿ, ಹಣ್ಣು ಖರೀದಿಗೆ ಮಾರುಕಟ್ಟೆಗೆ ಬರಬೇಕು. ಇದನ್ನು ತಪ್ಪಿಸುವ ಸಲುವಾಗಿ ಅವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದರು.</p>.<p>ಹಾಪ್ಕಾಮ್ಸ್ ಮತ್ತು ಹನಿ ಮಿತ್ರ ತಂಡದವರು ಕೈಜೋಡಿಸಿದ್ದಾರೆ. ಪ್ರತಿದಿನ ಒಂದೊಂದು ವಾರ್ಡ್ಗೆ ತೆರಳಿ ಮಾರಾಟ ಮಾಡಲಾಗುವುದು ಎಂದು ಹೇಳಿದರು.</p>.<p>ಹನಿ ಮಿತ್ರ ತಂಡದ ಎಚ್.ಪಿ.ನೀಲೇಶ್, ‘ಸ್ನೇಹಿತರೆಲ್ಲಾ ಜತೆಗೂಡಿ ಹನಿ ಸೇವೆಯೇ ಜೀವನ ಎಂಬ ಎನ್ಜಿಒ ಮೂಲಕ ನಗರದ 35 ವಾರ್ಡ್ಗಳಲ್ಲೂ ಮನೆ ಮನೆಗೆ ತರಕಾರಿ ತಲುಪಿಸುವ ಉದ್ದೇಶದಿಂದ ಈ ಕಾರ್ಯ ಮಾಡುತ್ತಿದ್ದೇವೆ. ರೈತರಿಂದ ಖರೀದಿಸಿದ ತರಕಾರಿಯನ್ನು 25 ವಾಹನಗಳಲ್ಲಿ ತಲುಪಿಸಲಾಗುತ್ತಿದೆ’ ಎಂದರು.</p>.<p>ಹಾಪ್ಕಾಮ್ಸ್ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್, ಹನಿಮಿತ್ರ ತಂಡದ ಹರೀಶ್, ಆಕಾಶ್, ಗುರುಪ್ರಸಾದ್ ಇದ್ದರು.</p>.<p>ಸಹಾಯವಾಣಿ 0816–2970310, 0816–2275189ಗೆ ಕರೆಮಾಡಿ ಮಾಹಿತಿ ಪಡೆಯಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತೋಟಗಾರಿಕಾ ಇಲಾಖೆ, ಹಾಪ್ಕಾಮ್ಸ್ ಮತ್ತು ‘ಹನಿಮಿತ್ರ’ ಸಂಸ್ಥೆ ಸಹಯೋಗದಲ್ಲಿ ರೈತರಿಂದ ನೇರವಾಗಿ ಖರೀದಿಸಿದ ತರಕಾರಿ ಮತ್ತು ಹಣ್ಣುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ನಗರದ ಜಿಲ್ಲಾ ತೋಟಗಾರಿಕಾ ಕಚೇರಿ ಆವರಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.</p>.<p>ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಘು ಮಾತನಾಡಿ, ‘ಜನಸಾಮಾನ್ಯರು ತರಕಾರಿ, ಹಣ್ಣು ಖರೀದಿಗೆ ಮಾರುಕಟ್ಟೆಗೆ ಬರಬೇಕು. ಇದನ್ನು ತಪ್ಪಿಸುವ ಸಲುವಾಗಿ ಅವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದರು.</p>.<p>ಹಾಪ್ಕಾಮ್ಸ್ ಮತ್ತು ಹನಿ ಮಿತ್ರ ತಂಡದವರು ಕೈಜೋಡಿಸಿದ್ದಾರೆ. ಪ್ರತಿದಿನ ಒಂದೊಂದು ವಾರ್ಡ್ಗೆ ತೆರಳಿ ಮಾರಾಟ ಮಾಡಲಾಗುವುದು ಎಂದು ಹೇಳಿದರು.</p>.<p>ಹನಿ ಮಿತ್ರ ತಂಡದ ಎಚ್.ಪಿ.ನೀಲೇಶ್, ‘ಸ್ನೇಹಿತರೆಲ್ಲಾ ಜತೆಗೂಡಿ ಹನಿ ಸೇವೆಯೇ ಜೀವನ ಎಂಬ ಎನ್ಜಿಒ ಮೂಲಕ ನಗರದ 35 ವಾರ್ಡ್ಗಳಲ್ಲೂ ಮನೆ ಮನೆಗೆ ತರಕಾರಿ ತಲುಪಿಸುವ ಉದ್ದೇಶದಿಂದ ಈ ಕಾರ್ಯ ಮಾಡುತ್ತಿದ್ದೇವೆ. ರೈತರಿಂದ ಖರೀದಿಸಿದ ತರಕಾರಿಯನ್ನು 25 ವಾಹನಗಳಲ್ಲಿ ತಲುಪಿಸಲಾಗುತ್ತಿದೆ’ ಎಂದರು.</p>.<p>ಹಾಪ್ಕಾಮ್ಸ್ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್, ಹನಿಮಿತ್ರ ತಂಡದ ಹರೀಶ್, ಆಕಾಶ್, ಗುರುಪ್ರಸಾದ್ ಇದ್ದರು.</p>.<p>ಸಹಾಯವಾಣಿ 0816–2970310, 0816–2275189ಗೆ ಕರೆಮಾಡಿ ಮಾಹಿತಿ ಪಡೆಯಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>