ಕೋವಿಡ್–19 ಸೋಂಕು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ತುಮಕೂರು ನಗರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಪ್ರತಿದಿನವೂ ಸಾವು ಸಂಭವಿಸುತ್ತಿದೆ. ಸೋಂಕು ತಡೆಗಟ್ಟುವ ಸಲುವಾಗಿ ಸಭೆ, ಸಮಾರಂಭ ನಿಷೇಧಿಸಲಾಗಿದೆ. ವಿವಾಹ ಮತ್ತಿತರ ಶುಭ ಕಾರ್ಯಗಳ ಮೇಲೂ ನಿಯಂತ್ರಣ ಹಾಕಲಾಗಿದೆ. ಗುಂಪು ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿಮಾಡಲಾಗಿದೆ. ಆದರೂ ಅಂತರ ಕಾಯ್ದುಕೊಳ್ಳಲಿಲ್ಲ. ಒತ್ತೊಟ್ಟಾಗಿ ನಿಂತು ಹೂವು, ಹಣ್ಣು, ಮಾವಿನ ಸೊಪ್ಪು, ಬೇವಿನ ಸೊಪ್ಪು ಸೇರಿದಂತೆ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು.