ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ: ಎಸಿಬಿ ಬಲೆಗೆ ಬಿದ್ದಿದ್ದ ಪಿಎಸ್‌ಐ ವಿಚಾರಣೆ ವೇಳೆ ಠಾಣೆಯಿಂದ ಪರಾರಿ

Last Updated 3 ನವೆಂಬರ್ 2021, 13:22 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದ ಸಬ್‌ಇನ್ಸ್‌ಪೆಕ್ಟರ್ ಸೋಮಶೇಖರ್ ವಿಚಾರಣೆ ಸಮಯದಲ್ಲಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ.

ಠಾಣೆಯಿಂದ ಓಡಿ ಹೋಗಲು ಪ್ರಯತ್ನಿಸಿದಾಗ ಸಾರ್ವಜನಿಕರು ಬೆನ್ನಟ್ಟಿ ಹಿಡಿಯಲು ಪ್ರಯತ್ನ ನಡೆಸಿದ್ದಾರೆ. ಪೊಲೀಸರೊಬ್ಬರ ಬೈಕ್ ತೆಗೆದುಕೊಂಡು ಯಾರ ಕೈಗೂ ಸಿಗದೆ ಶರವೇಗದಲ್ಲಿ ಪರಾರಿಯಾಗಿದ್ದಾರೆ.

ಸಬ್‌ಇನ್ಸ್‌ಪೆಕ್ಟರ್ ಸೋಮಶೇಖರ್, ಹೆಡ್‌ ಕಾನ್‌ಸ್ಟೆಬಲ್ ನಯಾಜ್ ಅಹಮದ್ ಅವರು ಲಂಚದ ಹಣ ತೆಗೆದುಕೊಳ್ಳುತ್ತಿದ್ದಾಗ ಹಿಡಿದು ವಿಚಾರಣೆ ಮಾಡುತ್ತಿದ್ದ ಸಮಯದಲ್ಲಿ ಎಸಿಬಿ ಪೊಲೀಸರು ಬಂಧಿಸುವ ಭಯದಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಶಕ್ಕೆ ಪಡೆದಿದ್ದ ಚಂದ್ರಣ್ಣ ಎಂಬುವರ ಕಾರು ಬಿಡುಗಡೆ ಮಾಡಲು ನಯಾಜ್ ಅಹಮದ್ ಮೂಲಕ ಹಣಕ್ಕೆ ಒತ್ತಾಯಿಸಿದ್ದರು. ಮೊದಲ ಕಂತಿನಲ್ಲಿ ₹12 ಸಾವಿರವನ್ನು ಪಿಎಸ್ಐ ಪಡೆದುಕೊಂಡಿದ್ದು, ಉಳಿದ ₹16 ಸಾವಿರ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT