ಕೃಷಿಕರ ಯಾವುದೇ ವ್ಯಾಪಾರ, ವಹಿವಾಟಿಗೆ ತೊಂದರೆ ನೀಡುವುದಿಲ್ಲ ಎನ್ನುವ ಸರ್ಕಾರ ರೈತರು ಬೆಳೆದ ಕೊಬ್ಬರಿ ಹರಾಜು ನಿಲ್ಲಿಸಿ ತೊಂದರೆ ನೀಡಿದ್ದಾರೆ. ವಾರಕ್ಕೆ ಎರಡು ದಿನ ಅಂದರೆ ಬುಧವಾರ ಮತ್ತು ಶನಿವಾರ ಕೊಬ್ಬರಿ ಹರಾಜು ಪ್ರಕ್ರಿಯೆ ನಡೆಯುತ್ತದೆ. ಆದರೆ ಶನಿವಾರ ವಾರಾಂತ್ಯದ ಕರ್ಫ್ಯೂ ಇರುವುದರಿಂದ ಮಾರುಕಟ್ಟೆ ತೆರೆಯದಂತೆ ಸೂಚಿಸಲಾಗಿತ್ತು.