<p><strong>ತುಮಕೂರು:</strong> ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ, ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರದ ವಿದ್ಯಾನಗರದ ಉದ್ಯಮಿ ಎ.ಎಂ.ಮಂಜುನಾಥ ಎಂಬುವರು ₹5.50 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಆರೋಪಿ ವಾಟ್ಸ್ ಆ್ಯಪ್ ಮುಖಾಂತರ ಸಂಪರ್ಕಿಸಿ ಷೇರು ಮಾರುಕಟ್ಟೆಯ ಬಗ್ಗೆ ತಿಳಿಸಿದ್ದಾರೆ. https;//m.optinexmarkets.net/ ಲಿಂಕ್ ಕಳುಹಿಸಿದ್ದು, ಮಂಜುನಾಥ ಸದರಿ ಲಿಂಕ್ ಕ್ಲಿಕ್ ಮಾಡಿ, ಅಗತ್ಯ ದಾಖಲೆ ಸಲ್ಲಿಸಿ, ಖಾತೆ ತೆರೆದಿದ್ದಾರೆ. optinexmarkets ಹೆಸರಿನಲ್ಲಿರುವ ಚಿನ್ನ ಮತ್ತು ಬೆಳ್ಳಿ ಷೇರುಗಳ ಮೇಲೆ ಹಣ ಹೂಡಿಕೆ ಮಾಡಿದರೆ ಉತ್ತಮ ಲಾಭ ದೊರೆಯುತ್ತದೆ ಎಂದಿದ್ದಾರೆ.</p>.<p>ಆರೋಪಿ ಮಾತು ನಂಬಿದ ಮಂಜುನಾಥ ಮೊದಲಿಗೆ ₹50 ಸಾವಿರ ಹೂಡಿಕೆ ಮಾಡಿದ್ದು, ಲಿಂಕ್ನಲ್ಲಿ ₹4,400 ಲಾಭ ಬಂದಿರುವುದಾಗಿ ತೋರಿಸಿದೆ. ದೊಡ್ಡ ಮೊತ್ತದ ಹೂಡಿಕೆ ಮಾಡಿದರೆ ಒಳ್ಳೆಯ ಲಾಭ ಸಿಗುತ್ತದೆ ಎಂದು ವಂಚಕರು ಹೇಳಿದ್ದಾರೆ. ಹಂತ ಹಂತವಾಗಿ ಒಟ್ಟು ₹5.50 ಲಕ್ಷ ಹಣ ಆರೋಪಿಗಳು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಿದ್ದಾರೆ.</p>.<p>ಹಣ ವಿತ್ ಡ್ರಾ ಮಾಡಲು ಹೋದರೆ, ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಮಾತ್ರ ಹಣ ನೀಡಲಾಗುತ್ತದೆ ಎಂದಿದ್ದಾರೆ. ಲಾಭದ ಆಮಿಷವೊಡ್ಡಿ ವಂಚಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಮಂಜುನಾಥ ಸೈಬರ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ, ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರದ ವಿದ್ಯಾನಗರದ ಉದ್ಯಮಿ ಎ.ಎಂ.ಮಂಜುನಾಥ ಎಂಬುವರು ₹5.50 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಆರೋಪಿ ವಾಟ್ಸ್ ಆ್ಯಪ್ ಮುಖಾಂತರ ಸಂಪರ್ಕಿಸಿ ಷೇರು ಮಾರುಕಟ್ಟೆಯ ಬಗ್ಗೆ ತಿಳಿಸಿದ್ದಾರೆ. https;//m.optinexmarkets.net/ ಲಿಂಕ್ ಕಳುಹಿಸಿದ್ದು, ಮಂಜುನಾಥ ಸದರಿ ಲಿಂಕ್ ಕ್ಲಿಕ್ ಮಾಡಿ, ಅಗತ್ಯ ದಾಖಲೆ ಸಲ್ಲಿಸಿ, ಖಾತೆ ತೆರೆದಿದ್ದಾರೆ. optinexmarkets ಹೆಸರಿನಲ್ಲಿರುವ ಚಿನ್ನ ಮತ್ತು ಬೆಳ್ಳಿ ಷೇರುಗಳ ಮೇಲೆ ಹಣ ಹೂಡಿಕೆ ಮಾಡಿದರೆ ಉತ್ತಮ ಲಾಭ ದೊರೆಯುತ್ತದೆ ಎಂದಿದ್ದಾರೆ.</p>.<p>ಆರೋಪಿ ಮಾತು ನಂಬಿದ ಮಂಜುನಾಥ ಮೊದಲಿಗೆ ₹50 ಸಾವಿರ ಹೂಡಿಕೆ ಮಾಡಿದ್ದು, ಲಿಂಕ್ನಲ್ಲಿ ₹4,400 ಲಾಭ ಬಂದಿರುವುದಾಗಿ ತೋರಿಸಿದೆ. ದೊಡ್ಡ ಮೊತ್ತದ ಹೂಡಿಕೆ ಮಾಡಿದರೆ ಒಳ್ಳೆಯ ಲಾಭ ಸಿಗುತ್ತದೆ ಎಂದು ವಂಚಕರು ಹೇಳಿದ್ದಾರೆ. ಹಂತ ಹಂತವಾಗಿ ಒಟ್ಟು ₹5.50 ಲಕ್ಷ ಹಣ ಆರೋಪಿಗಳು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಿದ್ದಾರೆ.</p>.<p>ಹಣ ವಿತ್ ಡ್ರಾ ಮಾಡಲು ಹೋದರೆ, ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಮಾತ್ರ ಹಣ ನೀಡಲಾಗುತ್ತದೆ ಎಂದಿದ್ದಾರೆ. ಲಾಭದ ಆಮಿಷವೊಡ್ಡಿ ವಂಚಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಮಂಜುನಾಥ ಸೈಬರ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>