ಹೊನ್ನವಳ್ಳಿ ಹೋಬಳಿಯ ಆದಿನಾಯಕನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಧ್ರುವರಾಜ್ ಸೋಮವಾರ ತಡ ರಾತ್ರಿ ಕುಡಿದ ಮತ್ತಿನಲ್ಲಿ ಮನೆಯಲ್ಲಿದ್ದ ಸಿಲಿಂಡರ್ ಪೈಪ್ ತೆಗೆದು ಸಿಲಿಂಡರ್ನಿಂದ ಗ್ಯಾಸ್ ಹೊರಬಿಟ್ಟು ಬೆಂಕಿ ಹಚ್ಚಿದ್ದಾನೆ. ತಕ್ಷಣ ಸಿಲಿಂಡರ್ ಸ್ಫೋಟಗೊಂಡು ಮೃತಪಟ್ಟಿದ್ದಾರೆ. ಮನೆಯೂ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ.