ರಾಷ್ಟ್ರೀಯ ಹೆದ್ದಾರಿ 4 ಮತ್ತು 207ರಲ್ಲಿ ಹಾದುಹೋಗಿರುವ ಪಟ್ಟಣವು ರಾಜಧಾನಿ ಬೆಂಗಳೂರು, ತುಮಕೂರು, ರಾಮನಗರ, ಮಾಗಡಿ, ದೊಡ್ಡಬಳ್ಳಾಪುರ, ಪಾವಗಡ ಮಧುಗಿರಿ ಹೀಗೆ ವಿವಿಧ ಜಿಲ್ಲೆ, ತಾಲ್ಲೂಕು ಕೇಂದ್ರಗಳಿಗೆ ಸಂಪರ್ಕ ಕಲ್ಪಿಸಲಿದೆ. ಗೊರವನಹಳ್ಳಿ, ದೇವರಾಯನದುರ್ಗ, ಸಿದ್ಧಗಂಗಾ ಮಠ, ಶಿವಗಂಗೆ, ಘಾಟಿ ಸುಬ್ರಹ್ಮಣ್ಯ ದೇವಾಲಯ ಹಾಗೂ ಹಲವು ಪ್ರವಾಸಿ ತಾಣಗಳಿಗೂ ಸಂಪರ್ಕ ಕಲ್ಪಿಸುತ್ತದೆ.