<p><strong>ಪಾವಗಡ:</strong> ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ದಳವಾಯಿಹಳ್ಳಿಯಲ್ಲಿ ನೀರು ಶುದ್ಧೀಕರಣ ಘಟಕ ಸ್ಥಗಿತಗೊಂಡು ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಕುಡಿಯುವ ನೀರನ್ನು ಟ್ಯಾಂಕರ್ನಿಂದ ಖರೀದಿಸಬೇಕಿದೆ. ಬೇಸಿಗೆಯಲ್ಲಿ ಕೊಳವೆ ಬಾವಿಗಳಲ್ಲಿಯೂ ನೀರು ಕಡಿಮೆಯಾಗಿರುವ ಕಾರಣ ದೂರದ ಜಮೀನುಗಳಿಗೆ ಹೋಗಿ ನೀರು ತರಬೇಕಿದೆ. ಬಿಸಿಲ ಬೇಗೆಯಲ್ಲಿ ನೀರು ತರುವುದೇ ಮಹಿಳೆಯರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿದರು.</p>.<p>ದ್ವಿಚಕ್ರ ವಾಹನ, ವಾಹನ ಇರುವವರು ದೂರದಿಂದ ನೀರು ತರುತ್ತಾರೆ. ಆದರೆ ವಾಹನಗಳಿಲ್ಲದವರುಅನಿವಾರ್ಯವಾಗಿ ನೀರು ಖರೀದಿಸಬೇಕಿದೆ. ಗ್ರಾಮದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಬಗ್ಗೆ ಗಮನಹರಿಸಬೇಕು ಎಂದು ಡಿ.ಇ. ಪಾಲಯ್ಯ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-17-1099894959</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ದಳವಾಯಿಹಳ್ಳಿಯಲ್ಲಿ ನೀರು ಶುದ್ಧೀಕರಣ ಘಟಕ ಸ್ಥಗಿತಗೊಂಡು ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಕುಡಿಯುವ ನೀರನ್ನು ಟ್ಯಾಂಕರ್ನಿಂದ ಖರೀದಿಸಬೇಕಿದೆ. ಬೇಸಿಗೆಯಲ್ಲಿ ಕೊಳವೆ ಬಾವಿಗಳಲ್ಲಿಯೂ ನೀರು ಕಡಿಮೆಯಾಗಿರುವ ಕಾರಣ ದೂರದ ಜಮೀನುಗಳಿಗೆ ಹೋಗಿ ನೀರು ತರಬೇಕಿದೆ. ಬಿಸಿಲ ಬೇಗೆಯಲ್ಲಿ ನೀರು ತರುವುದೇ ಮಹಿಳೆಯರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿದರು.</p>.<p>ದ್ವಿಚಕ್ರ ವಾಹನ, ವಾಹನ ಇರುವವರು ದೂರದಿಂದ ನೀರು ತರುತ್ತಾರೆ. ಆದರೆ ವಾಹನಗಳಿಲ್ಲದವರುಅನಿವಾರ್ಯವಾಗಿ ನೀರು ಖರೀದಿಸಬೇಕಿದೆ. ಗ್ರಾಮದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಬಗ್ಗೆ ಗಮನಹರಿಸಬೇಕು ಎಂದು ಡಿ.ಇ. ಪಾಲಯ್ಯ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-17-1099894959</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>