<p><strong>ಕುಣಿಗಲ್</strong>: ಶಾಸಕ ಡಾ.ರಂಗನಾಥ್ ಅವರು ನವರಾತ್ರಿ ಒಂಬತ್ತು ದಿನಗಳ ಉಪವಾಸ ಮುಗಿಸಿ, ತಾಲ್ಲೂಕಿನ ಗಡಿಭಾಗದ ವಗೆರಗೆರೆ ಗ್ರಾಮದ ದಲಿತ ಸಮುದಾಯದ ವಿಧವೆ ಜಯಮ್ಮ ಅವರ ಮನೆಯಲ್ಲಿ ಭೋಜನ ಸವಿಸಿದರು.</p>.<p>ಉಪವಾಸ ಅಂತ್ಯಗೊಳಿಸಲು ಬಂದ ಶಾಸಕರನ್ನು ದಲಿತ ಮುಖಂಡರು ಎತ್ತಿನಗಾಡಿ ಮೆರವಣಿಗೆಯೊಂದಿಗೆ ಸಂಭ್ರಮದಿಂದ ಸ್ವಾಗತಿಸಿದರು. ಊಟಕ್ಕೆ ಗ್ರಾಮೀಣ ಸೊಗಡಿನ ಮುದ್ದೆ, ಸುಪ್ಪಿನ ಸಾರು ಮತ್ತು ಪಾಯಸ ಬಡಿಸಲಾಯಿತು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್ಶಿಪ್ಟ್ ಮತ್ತು ಬಿಬಿಎಂಪಿ ವಿಭಜನೆ ಕಾರ್ಯವನ್ನು ಕುಮಾರಸ್ವಾಮಿ ಅವರು ಮಾಡಲು ಯೋಚಿಸಿದಾಗ ಯಾವುದೇ ಟೀಕೆ ಇರಲಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ಅವರು ಅದೇ ಕಾರ್ಯ ಮಾಡಲು ಹೋದಾಗ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಕುಣಿಗಲ್ ತಾಲೂಕನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುವ ವಿಚಾರ ಹಾಗೂ ತಾಲ್ಲೂಕಿನ ನೀರಾವರಿ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಶಾಸಕರು ಸಹಕರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕುಣಿಗಲ್ ಬೆಂಗಳೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬಂದರೆ ಈ ಸಮಸ್ಯೆಗಳ ಪರಿಹಾರ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಜನಾಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.</p>.<p>ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ, ಮುಖಂಡ ಪಾಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ಶಾಸಕ ಡಾ.ರಂಗನಾಥ್ ಅವರು ನವರಾತ್ರಿ ಒಂಬತ್ತು ದಿನಗಳ ಉಪವಾಸ ಮುಗಿಸಿ, ತಾಲ್ಲೂಕಿನ ಗಡಿಭಾಗದ ವಗೆರಗೆರೆ ಗ್ರಾಮದ ದಲಿತ ಸಮುದಾಯದ ವಿಧವೆ ಜಯಮ್ಮ ಅವರ ಮನೆಯಲ್ಲಿ ಭೋಜನ ಸವಿಸಿದರು.</p>.<p>ಉಪವಾಸ ಅಂತ್ಯಗೊಳಿಸಲು ಬಂದ ಶಾಸಕರನ್ನು ದಲಿತ ಮುಖಂಡರು ಎತ್ತಿನಗಾಡಿ ಮೆರವಣಿಗೆಯೊಂದಿಗೆ ಸಂಭ್ರಮದಿಂದ ಸ್ವಾಗತಿಸಿದರು. ಊಟಕ್ಕೆ ಗ್ರಾಮೀಣ ಸೊಗಡಿನ ಮುದ್ದೆ, ಸುಪ್ಪಿನ ಸಾರು ಮತ್ತು ಪಾಯಸ ಬಡಿಸಲಾಯಿತು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್ಶಿಪ್ಟ್ ಮತ್ತು ಬಿಬಿಎಂಪಿ ವಿಭಜನೆ ಕಾರ್ಯವನ್ನು ಕುಮಾರಸ್ವಾಮಿ ಅವರು ಮಾಡಲು ಯೋಚಿಸಿದಾಗ ಯಾವುದೇ ಟೀಕೆ ಇರಲಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ಅವರು ಅದೇ ಕಾರ್ಯ ಮಾಡಲು ಹೋದಾಗ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಕುಣಿಗಲ್ ತಾಲೂಕನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುವ ವಿಚಾರ ಹಾಗೂ ತಾಲ್ಲೂಕಿನ ನೀರಾವರಿ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಶಾಸಕರು ಸಹಕರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕುಣಿಗಲ್ ಬೆಂಗಳೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬಂದರೆ ಈ ಸಮಸ್ಯೆಗಳ ಪರಿಹಾರ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಜನಾಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.</p>.<p>ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ, ಮುಖಂಡ ಪಾಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>