ರಾಜ್ಯದಲ್ಲಿ ಸಮುದಾಯದ 1 ಕೋಟಿ ಜನರು ಇದ್ದಾರೆ. ಜನಸಂಖ್ಯೆ ಆಧಾರಿತ ಮೀಸಲಾತಿಗಾಗಿ ಬಹಳ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಆದರೆ ರಾಜ್ಯದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಇದಕ್ಕೆ ಸ್ಪಂದಿಸುತ್ತಿಲ್ಲ. ಆದ ಕಾರಣ ಈ ಮೂರು ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ನಿರ್ಧರಿಸಲಾಗಿದೆ ಎಂದು ಎಚ್ಚರಿಸಿದರು.