<p><strong>ತುಮಕೂರು:</strong> ಜಿಲ್ಲಾ ಆಡಳಿತ ಕಳೆದ ವರ್ಷ ಆಚರಿಸಿದ ದಸರಾ ಮಹೋತ್ಸವದಲ್ಲಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗ ನಡೆದಿದೆ ಎಂದು ತುಮಕೂರು ದಸರಾ ಸಮಿತಿ ಖಜಾಂಚಿ ಜಿ.ಎಸ್.ಬಸವರಾಜು ಇಲ್ಲಿ ಶುಕ್ರವಾರ ಆರೋಪಿಸಿದರು.</p>.<p>ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಮನಸ್ಸಿಗೆ ಬಂದಂತೆ ಖರ್ಚು ಮಾಡಲಾಗಿದೆ. ಹಿಂದಿನ ವರ್ಷದ ಲೆಕ್ಕ ನೀಡದೆ, ಈಗ ಮತ್ತೊಂದು ದಸರಾ ಆಚರಣೆಗೆ ಜಿಲ್ಲಾ ಆಡಳಿತ ಮಂದಾಗಿದೆ. ಯಾವ ಮುಖಹೊತ್ತು ಮತ್ತೊಂದು ದಸರಾ ಆಚರಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು.</p>.<p>ದಸರಾ ಆಚರಣೆಯಲ್ಲಿ ಆಗಿರುವ ಹಣದ ಅಕ್ರಮಗಳ ಬಗ್ಗೆ ಮಾಹಿತಿ ಹಕ್ಕಿನಡಿ ಪಡೆದಿರುವ ದಾಖಲಾತಿಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.</p>.<p>ಅಧಿಕಾರಿಗಳು ಹಣ, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದರೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ. ರಾಜ್ಯ ಸರ್ಕಾರದಿಂದ ₹1 ಕೋಟಿ ಅನುದಾನ ಬಂದಿದ್ದು, ಅದರಲ್ಲಿ ₹15 ಲಕ್ಷವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಖರ್ಚು ಮಾಡಲಾಗಿದೆ. ಉಳಿದ ₹85 ಲಕ್ಷ ಏನಾಯಿತು? ಯಾವುದಕ್ಕೆ ಖರ್ಚಾಯಿತು? ಎಂಬ ಮಾಹಿತಿ ಕೊಡುತ್ತಿಲ್ಲ. ಜಿಲ್ಲಾ ಆಡಳಿತದ ಬಳಿ ಈ ವಿವರಗಳೇ ಇಲ್ಲ ಎಂದು ದೂರಿದರು.</p>.<p>ಸಾರ್ವಜನಿಕರು ಕಟ್ಟಿದ ತೆರಿಗೆ ಹಣದಲ್ಲಿ ಮಹಾನಗರ ಪಾಲಿಕೆಯಿಂದ ₹49.99 ಲಕ್ಷ ನೀಡಲಾಗಿದೆ. ಜನರ ತೆರಿಗೆ ಹಣವನ್ನು ಆಯುಕ್ತರು ದಸರಾ ಉತ್ಸವಕ್ಕೆ ಬಳಸಿದ್ದಾರೆ. ಹಿಂದೆ ತುಮಕೂರು ದಸರಾ ಸಮಿತಿಗೆ ದೇಣಿಗೆ ಕೇಳಿದಾಗ ₹25 ಸಾವಿರಕ್ಕಿಂತ ಹೆಚ್ಚು ಹಣ ನೀಡಲು ಬರುವುದಿಲ್ಲ ಎಂದು ಹೇಳಿದರು. ಆದರೆ ಜಿಲ್ಲಾ ಆಡಳಿತ ನಡೆಸುವ ದಸರಾ ಉತ್ಸವಕ್ಕೆ ₹50 ಲಕ್ಷವನ್ನು ಹೇಗೆ ಕೊಡಲು ಸಾಧ್ಯವಾಯಿತು ಎಂದು ಪ್ರಶ್ನಿಸಿದರು.</p>.<p>ಟೂಡಾದಿಂದಲೂ ₹25 ಲಕ್ಷ ಪಡೆಯಲಾಗಿದೆ. ಸಾರ್ವಜನಿಕರು ದೇಣಿಗೆ ನೀಡಿದ ₹50 ಲಕ್ಷವನ್ನು ಯಾವುದಕ್ಕೆ ಖರ್ಚು ಮಾಡಲಾಗಿದೆ ಎಂಬುದರ ಲೆಕ್ಕ ನೀಡಬೇಕು ಎಂದು ಆಗ್ರಹಿಸಿದರು.</p>.<p>ದಸರಾಕ್ಕೆ ಸಜ್ಜು: ದಸರಾ ಉತ್ಸವ ಸಮಿತಿ ಅಧ್ಯಕ್ಷ ಡಾ.ಎಸ್.ಪರಮೇಶ್ ಮಾತನಾಡಿ, ‘35ನೇ ವರ್ಷದ ದಸರಾ ಮಹೋತ್ಸವವನ್ನು ಶ್ರೀರಾಮ ಮಂದಿರದಲ್ಲಿ ಎಂದಿನಂತೆ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.</p>.<p>ದಸರಾ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ.ಜೆ.ಲಕ್ಷ್ಮಿಕಾಂತ್, ‘ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಆಚರಣೆಗೆ ಅವಕಾಶ ಇಲ್ಲದಂತಾಗಿದೆ’ ಎಂದರು.</p>.<p>ದಸರಾ ಸಮಿತಿ ಅಧ್ಯಕ್ಷ ಬಿ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಮಹೇಶ್, ಸಂಚಾಲಕ ಕೆ.ಎನ್.ಗೋವಿಂದರಾವ್, ಕಾರ್ಯದರ್ಶಿಗಳಾದ ಕೆ.ಶಂಕರ್ ಉಪ್ಪಾರಹಳ್ಳಿ, ಕೆ.ಪರಶುರಾಮಯ್ಯ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲಾ ಆಡಳಿತ ಕಳೆದ ವರ್ಷ ಆಚರಿಸಿದ ದಸರಾ ಮಹೋತ್ಸವದಲ್ಲಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗ ನಡೆದಿದೆ ಎಂದು ತುಮಕೂರು ದಸರಾ ಸಮಿತಿ ಖಜಾಂಚಿ ಜಿ.ಎಸ್.ಬಸವರಾಜು ಇಲ್ಲಿ ಶುಕ್ರವಾರ ಆರೋಪಿಸಿದರು.</p>.<p>ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಮನಸ್ಸಿಗೆ ಬಂದಂತೆ ಖರ್ಚು ಮಾಡಲಾಗಿದೆ. ಹಿಂದಿನ ವರ್ಷದ ಲೆಕ್ಕ ನೀಡದೆ, ಈಗ ಮತ್ತೊಂದು ದಸರಾ ಆಚರಣೆಗೆ ಜಿಲ್ಲಾ ಆಡಳಿತ ಮಂದಾಗಿದೆ. ಯಾವ ಮುಖಹೊತ್ತು ಮತ್ತೊಂದು ದಸರಾ ಆಚರಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು.</p>.<p>ದಸರಾ ಆಚರಣೆಯಲ್ಲಿ ಆಗಿರುವ ಹಣದ ಅಕ್ರಮಗಳ ಬಗ್ಗೆ ಮಾಹಿತಿ ಹಕ್ಕಿನಡಿ ಪಡೆದಿರುವ ದಾಖಲಾತಿಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.</p>.<p>ಅಧಿಕಾರಿಗಳು ಹಣ, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದರೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ. ರಾಜ್ಯ ಸರ್ಕಾರದಿಂದ ₹1 ಕೋಟಿ ಅನುದಾನ ಬಂದಿದ್ದು, ಅದರಲ್ಲಿ ₹15 ಲಕ್ಷವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಖರ್ಚು ಮಾಡಲಾಗಿದೆ. ಉಳಿದ ₹85 ಲಕ್ಷ ಏನಾಯಿತು? ಯಾವುದಕ್ಕೆ ಖರ್ಚಾಯಿತು? ಎಂಬ ಮಾಹಿತಿ ಕೊಡುತ್ತಿಲ್ಲ. ಜಿಲ್ಲಾ ಆಡಳಿತದ ಬಳಿ ಈ ವಿವರಗಳೇ ಇಲ್ಲ ಎಂದು ದೂರಿದರು.</p>.<p>ಸಾರ್ವಜನಿಕರು ಕಟ್ಟಿದ ತೆರಿಗೆ ಹಣದಲ್ಲಿ ಮಹಾನಗರ ಪಾಲಿಕೆಯಿಂದ ₹49.99 ಲಕ್ಷ ನೀಡಲಾಗಿದೆ. ಜನರ ತೆರಿಗೆ ಹಣವನ್ನು ಆಯುಕ್ತರು ದಸರಾ ಉತ್ಸವಕ್ಕೆ ಬಳಸಿದ್ದಾರೆ. ಹಿಂದೆ ತುಮಕೂರು ದಸರಾ ಸಮಿತಿಗೆ ದೇಣಿಗೆ ಕೇಳಿದಾಗ ₹25 ಸಾವಿರಕ್ಕಿಂತ ಹೆಚ್ಚು ಹಣ ನೀಡಲು ಬರುವುದಿಲ್ಲ ಎಂದು ಹೇಳಿದರು. ಆದರೆ ಜಿಲ್ಲಾ ಆಡಳಿತ ನಡೆಸುವ ದಸರಾ ಉತ್ಸವಕ್ಕೆ ₹50 ಲಕ್ಷವನ್ನು ಹೇಗೆ ಕೊಡಲು ಸಾಧ್ಯವಾಯಿತು ಎಂದು ಪ್ರಶ್ನಿಸಿದರು.</p>.<p>ಟೂಡಾದಿಂದಲೂ ₹25 ಲಕ್ಷ ಪಡೆಯಲಾಗಿದೆ. ಸಾರ್ವಜನಿಕರು ದೇಣಿಗೆ ನೀಡಿದ ₹50 ಲಕ್ಷವನ್ನು ಯಾವುದಕ್ಕೆ ಖರ್ಚು ಮಾಡಲಾಗಿದೆ ಎಂಬುದರ ಲೆಕ್ಕ ನೀಡಬೇಕು ಎಂದು ಆಗ್ರಹಿಸಿದರು.</p>.<p>ದಸರಾಕ್ಕೆ ಸಜ್ಜು: ದಸರಾ ಉತ್ಸವ ಸಮಿತಿ ಅಧ್ಯಕ್ಷ ಡಾ.ಎಸ್.ಪರಮೇಶ್ ಮಾತನಾಡಿ, ‘35ನೇ ವರ್ಷದ ದಸರಾ ಮಹೋತ್ಸವವನ್ನು ಶ್ರೀರಾಮ ಮಂದಿರದಲ್ಲಿ ಎಂದಿನಂತೆ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.</p>.<p>ದಸರಾ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ.ಜೆ.ಲಕ್ಷ್ಮಿಕಾಂತ್, ‘ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಆಚರಣೆಗೆ ಅವಕಾಶ ಇಲ್ಲದಂತಾಗಿದೆ’ ಎಂದರು.</p>.<p>ದಸರಾ ಸಮಿತಿ ಅಧ್ಯಕ್ಷ ಬಿ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಮಹೇಶ್, ಸಂಚಾಲಕ ಕೆ.ಎನ್.ಗೋವಿಂದರಾವ್, ಕಾರ್ಯದರ್ಶಿಗಳಾದ ಕೆ.ಶಂಕರ್ ಉಪ್ಪಾರಹಳ್ಳಿ, ಕೆ.ಪರಶುರಾಮಯ್ಯ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>