<p><strong>ತುರುವೇಕೆರೆ:</strong> ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಸಾಹಿತ್ಯ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಿದೆ. ಇದಕ್ಕೆ ಧರ್ಮದ ಲೇಪನ ಮಾಡಿ ವಿರೋಧಿಸುವುದು ಸರಿಯಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಪ್ರತಿಪಾದಿಸಿದರು.</p>.<p>ಪಟ್ಟಣದ ಜಿಜೆಸಿ ಕುವೆಂಪು ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ ಹಾಗೂ ಸಮನ್ವಯಾಧಿಕಾರಿ ಕಚೇರಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಬಾನು ಮುಷ್ತಾಕ್ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ, ಬೂಕರ್ ಪ್ರಶಸ್ತಿ ಪಡೆಯುವುದೆಂದರೆ ಸಾಮಾನ್ಯವೇನಲ್ಲ. ಈ ಪ್ರಶಸ್ತಿ ಗಳಿಸುವುದೆಂದರೆ ದೇಶವನ್ನು ಪ್ರತಿನಿಧಿಸಿದಂತೆ. ಇವರ ಒಂದಿಷ್ಟು ಲೇಖನಗಳನ್ನು ಸಹ ಓದಿದ್ದೇನೆ ಮತ್ತೆ ಮತ್ತೆ ಓದಬೇಕಿನಿಸುವ ಬರವಣಿಗೆ ಅವರದು. ಈ ಹಿಂದೆ ಕೂಡ ಕನ್ನಡದ ಖ್ಯಾತ ಸಾಹಿತಿ ಕೆ.ಎಸ್.ನಿಸ್ಸಾರ್ ಅಹಮದ್ ಅವರು ಕೂಡ ದಸರಾ ಉದ್ಘಾಟನೆ ಮಾಡಿದ್ದಾರು. ಹಿಂದೆ ಇಲ್ಲದ ಈ ವಿವಾದ ಈಗ ಏಕೆ ಮುನ್ನೆಲೆಗೆ ಬಂದಿದೆ ಎಂದು ವಿಷಾದಿಸಿದರು.</p>.<p>ಶಿಕ್ಷಕರ ನೇಮಕಾತಿ ಇಲ್ಲದೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆಗುತ್ತಿಲ್ಲ. ಈ ಬಗ್ಗೆ ಸದನದಲ್ಲಿಯೂ ಚರ್ಚಿಸಿದ್ದೇನೆ. ಆಂದ್ರ ಪ್ರದೇಶದ ಮಾದರಿಯಲ್ಲಿ ಅತಿಥಿ ಶಿಕ್ಷಕರಿಗೆ ಹೆಚ್ಚಿನ ಗೌರವಧನ ನೀಡಬೇಕು ಇಲ್ಲವೇ ಖಾಯಂಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.</p>.<p>ನಿವೃತ್ತ ಶಿಕ್ಷಕರು ಮತ್ತು ಉತ್ತಮ ಶಿಕ್ಷಕರನ್ನು ಸತ್ಕರಿಸಲಾಯಿತು. </p>.<p>ಬಿಇಒ ಕಚೇರಿಯಿಂದ ರಾಧಾಕೃಷ್ಣನ್ ಭಾವಚಿತ್ರವನ್ನು ತೆರೆದ ವಾಹನದಲ್ಲಿ ವಾದ್ಯಗೋಷ್ಠಿ ಹಾಗೂ ಸೋಮನ ಕುಣಿತದೊಂದಿಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.</p>.<p>ಬಿಇಒ ಎನ್.ಸೋಮಶೇಖರ್, ಇ.ಒ.ಶಿವರಾಜಯ್ಯ, ಗ್ರೇಡ್-2 ತಹಶೀಲ್ದಾರ್ ಬಿ.ಸಿ.ಸುಮತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಚಿದಾನಂದ್, ಸುರೇಶ್, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಅಕ್ಷರದಾಸೋಹದ ನಿರ್ದೇಶಕಿ ಎಚ್.ಕೆ.ಸವಿತಾ, ವ್ಯವಸ್ಥಾಪಕ ಕೃಷ್ಣಪ್ರಸಾದ್, ಕಸಾಪ ಅಧ್ಯಕ್ಷ ಡಿ.ಪಿರಾಜು, ಸಾವಿತ್ರಿಬಾಯಿ ಫುಲೆ ಸಂಘದ ಭವ್ಯಾ ಸಂಪತ್, ಇಸಿಒ ಸಿದ್ದಪ್ಪ, ವಕೀಲ ಧನಪಾಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಸಾಹಿತ್ಯ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಿದೆ. ಇದಕ್ಕೆ ಧರ್ಮದ ಲೇಪನ ಮಾಡಿ ವಿರೋಧಿಸುವುದು ಸರಿಯಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಪ್ರತಿಪಾದಿಸಿದರು.</p>.<p>ಪಟ್ಟಣದ ಜಿಜೆಸಿ ಕುವೆಂಪು ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ ಹಾಗೂ ಸಮನ್ವಯಾಧಿಕಾರಿ ಕಚೇರಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಬಾನು ಮುಷ್ತಾಕ್ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ, ಬೂಕರ್ ಪ್ರಶಸ್ತಿ ಪಡೆಯುವುದೆಂದರೆ ಸಾಮಾನ್ಯವೇನಲ್ಲ. ಈ ಪ್ರಶಸ್ತಿ ಗಳಿಸುವುದೆಂದರೆ ದೇಶವನ್ನು ಪ್ರತಿನಿಧಿಸಿದಂತೆ. ಇವರ ಒಂದಿಷ್ಟು ಲೇಖನಗಳನ್ನು ಸಹ ಓದಿದ್ದೇನೆ ಮತ್ತೆ ಮತ್ತೆ ಓದಬೇಕಿನಿಸುವ ಬರವಣಿಗೆ ಅವರದು. ಈ ಹಿಂದೆ ಕೂಡ ಕನ್ನಡದ ಖ್ಯಾತ ಸಾಹಿತಿ ಕೆ.ಎಸ್.ನಿಸ್ಸಾರ್ ಅಹಮದ್ ಅವರು ಕೂಡ ದಸರಾ ಉದ್ಘಾಟನೆ ಮಾಡಿದ್ದಾರು. ಹಿಂದೆ ಇಲ್ಲದ ಈ ವಿವಾದ ಈಗ ಏಕೆ ಮುನ್ನೆಲೆಗೆ ಬಂದಿದೆ ಎಂದು ವಿಷಾದಿಸಿದರು.</p>.<p>ಶಿಕ್ಷಕರ ನೇಮಕಾತಿ ಇಲ್ಲದೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆಗುತ್ತಿಲ್ಲ. ಈ ಬಗ್ಗೆ ಸದನದಲ್ಲಿಯೂ ಚರ್ಚಿಸಿದ್ದೇನೆ. ಆಂದ್ರ ಪ್ರದೇಶದ ಮಾದರಿಯಲ್ಲಿ ಅತಿಥಿ ಶಿಕ್ಷಕರಿಗೆ ಹೆಚ್ಚಿನ ಗೌರವಧನ ನೀಡಬೇಕು ಇಲ್ಲವೇ ಖಾಯಂಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.</p>.<p>ನಿವೃತ್ತ ಶಿಕ್ಷಕರು ಮತ್ತು ಉತ್ತಮ ಶಿಕ್ಷಕರನ್ನು ಸತ್ಕರಿಸಲಾಯಿತು. </p>.<p>ಬಿಇಒ ಕಚೇರಿಯಿಂದ ರಾಧಾಕೃಷ್ಣನ್ ಭಾವಚಿತ್ರವನ್ನು ತೆರೆದ ವಾಹನದಲ್ಲಿ ವಾದ್ಯಗೋಷ್ಠಿ ಹಾಗೂ ಸೋಮನ ಕುಣಿತದೊಂದಿಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.</p>.<p>ಬಿಇಒ ಎನ್.ಸೋಮಶೇಖರ್, ಇ.ಒ.ಶಿವರಾಜಯ್ಯ, ಗ್ರೇಡ್-2 ತಹಶೀಲ್ದಾರ್ ಬಿ.ಸಿ.ಸುಮತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಚಿದಾನಂದ್, ಸುರೇಶ್, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಅಕ್ಷರದಾಸೋಹದ ನಿರ್ದೇಶಕಿ ಎಚ್.ಕೆ.ಸವಿತಾ, ವ್ಯವಸ್ಥಾಪಕ ಕೃಷ್ಣಪ್ರಸಾದ್, ಕಸಾಪ ಅಧ್ಯಕ್ಷ ಡಿ.ಪಿರಾಜು, ಸಾವಿತ್ರಿಬಾಯಿ ಫುಲೆ ಸಂಘದ ಭವ್ಯಾ ಸಂಪತ್, ಇಸಿಒ ಸಿದ್ದಪ್ಪ, ವಕೀಲ ಧನಪಾಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>