<p><strong>ತುಮಕೂರು:</strong> ಬಸವ ವಸತಿ ಯೋಜನೆಯ ಹಣ ಬಿಡುಗಡೆ ಮಾಡಲು ₹4 ಸಾವಿರ ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದಿದ್ದ ಕೊರಟಗೆರೆ ತಾಲ್ಲೂಕಿನ ಬಿಡಿಪುರ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ಟಿ.ಎಲ್.ಹರೀಶ್ ಎಂಬುವರಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದೆ.</p>.<p>ಬೊಮ್ಮಲದೇವಿ ಗ್ರಾಮದ ದತ್ತಾತ್ರೇಯ ಎಂಬುವರಿಂದ ₹5 ಸಾವಿರ ಹಣ ಪಡೆದು, ಮತ್ತೆ ₹4 ಸಾವಿರ ಕೊಡುವಂತೆ ಒತ್ತಾಯಿಸಿದ್ದರು. ದತ್ತಾತ್ರೇಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದರು. ಹರೀಶ್ ₹4 ಸಾವಿರ ಹಣ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದಿದ್ದರು. ಎಸಿಬಿಯ ಡಿವೈಎಸ್ಪಿ ಬಿ.ಉಮಾಶಂಕರ್ ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ಸ್ಪೆಕ್ಟರ್ ಎಚ್.ಸುನೀಲ್ಕುಮಾರ್, ಎನ್.ವೀರೇಂದ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಬುಧವಾರ ಸದರಿ ಪ್ರಕರಣದ ಕುರಿತು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಆರ್.ಪಿ.ಪ್ರಕಾಶ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಬಸವ ವಸತಿ ಯೋಜನೆಯ ಹಣ ಬಿಡುಗಡೆ ಮಾಡಲು ₹4 ಸಾವಿರ ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದಿದ್ದ ಕೊರಟಗೆರೆ ತಾಲ್ಲೂಕಿನ ಬಿಡಿಪುರ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ಟಿ.ಎಲ್.ಹರೀಶ್ ಎಂಬುವರಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದೆ.</p>.<p>ಬೊಮ್ಮಲದೇವಿ ಗ್ರಾಮದ ದತ್ತಾತ್ರೇಯ ಎಂಬುವರಿಂದ ₹5 ಸಾವಿರ ಹಣ ಪಡೆದು, ಮತ್ತೆ ₹4 ಸಾವಿರ ಕೊಡುವಂತೆ ಒತ್ತಾಯಿಸಿದ್ದರು. ದತ್ತಾತ್ರೇಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದರು. ಹರೀಶ್ ₹4 ಸಾವಿರ ಹಣ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದಿದ್ದರು. ಎಸಿಬಿಯ ಡಿವೈಎಸ್ಪಿ ಬಿ.ಉಮಾಶಂಕರ್ ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ಸ್ಪೆಕ್ಟರ್ ಎಚ್.ಸುನೀಲ್ಕುಮಾರ್, ಎನ್.ವೀರೇಂದ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಬುಧವಾರ ಸದರಿ ಪ್ರಕರಣದ ಕುರಿತು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಆರ್.ಪಿ.ಪ್ರಕಾಶ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>